ಮೂರು ಉತ್ಸವಕ್ಕೆ ರಾಷ್ಟ್ರೀಯ ಮಾನ್ಯತೆ ನೀಡಲು ಚಿಂತನೆ
Team Udayavani, Mar 7, 2020, 3:04 AM IST
ವಿಧಾನಪರಿಷತ್: ನಾಡಹಬ್ಬ ದಸರಾ, ಹಂಪಿ ಉತ್ಸವ ಹಾಗೂ ಬೆಂಗಳೂರು ಹಬ್ಬವನ್ನು ರಾಷ್ಟ್ರೀಯ ಉತ್ಸವದ ಮಾದರಿಯಲ್ಲಿ ನಡೆಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು. ಹಂಪಿ ಉತ್ಸವಕ್ಕೆ ಸಂಬಂಧಿಸಿದಂತೆ ಸದಸ್ಯರಾದ ಅಲ್ಲಂ ವೀರಭದ್ರಪ್ಪ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೈಸೂರು ದಸರಾ, ಹಂಪಿ ಉತ್ಸವ ಹಾಗೂ ಬೆಂಗಳೂರು ಹಬ್ಬವನ್ನು ರಾಷ್ಟ್ರೀಯ ಉತ್ಸವದ ರೀತಿಯಲ್ಲಿ ನಡೆಸಲು ಮುಂದಾಗಿದ್ದೇವೆ.
ಹಂಪಿ ಉತ್ಸವ ಅನೇಕ ವರ್ಷದಿಂದ ನಡೆಯುತ್ತಿದೆಯಾದರೂ ನಿಗದಿತ ದಿನಾಂಕದಂದು ನಡೆ ಯುತ್ತಿರಲಿಲ್ಲ. ಕೆಲವು ವರ್ಷ ನಡೆಯದ ನಿದರ್ಶನವೂ ಇದೆ. ಹೀಗಾಗಿ ಪ್ರತಿ ವರ್ಷ ಕೃಷ್ಣದೇವರಾಯನ ಪಟ್ಟಾಭಿ ಷೇಕವಾದ ದಿನ ಜ.10ರಿಂದ 3 ದಿನ ಹಂಪಿ ಉತ್ಸವ ನಡೆ ಸಲು ನಿರ್ಧರ ಮಾಡಿದ್ದೇವೆಂದರು.
ಹಾಗೆಯೇ ರಾಜ್ಯದ ಪ್ರಮುಖ ಮಹಾರಾಜ ಸಂಸ್ಥಾನಗಳಾದ ಕಲ್ಯಾಣ ಚಾಲುಕ್ಯರು, ಬಾದಾಮಿ ಚಾಲುಕ್ಯರು, ಕದಂಬರು, ಚಿತ್ರದುರ್ಗ ನಾಯಕರು ಸೇರಿದಂತೆ 9 ರಾಜ್ಯ ಉತ್ಸವ ನಡೆಸಲು ಬೇಕಾದ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಹಂಪಿಯಲ್ಲಿ ರೋಪ್ ವೇ ಅಥವಾ ಇತರೆ ಅಭಿವೃದ್ಧಿ ಕಾರ್ಯಕ್ಕೆ ಜಾಗತಿಕ ಮಟ್ಟದ ಅನುಮತಿ ಅಗತ್ಯವಿರುವು ದರಿಂದ ವಿಶ್ವ ಪ್ರಸಿದ್ಧ ತಾಣವಾಗಿದ್ದರಿಂದ ಅನುಮತಿ ಸಿಕ್ಕ ನಂತರ ಈ ಬಗ್ಗೆ ಚಿಂತನೆ ನಡೆಸಲಿದ್ದೇವೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ