ಲ್ಯಾಮ್ಡಾ ಯೋಜನೆ ಜಾರಿಗೆ ಚಿಂತನೆ: ಡಿಸಿಎಂ
Team Udayavani, Nov 12, 2019, 3:00 AM IST
ಚಿಕ್ಕಮಗಳೂರು: ಎಂಜಿನಿಯರಿಂಗ್ ಹಾಗೂ ಡಿಪ್ಲೊಮಾ ಕಾಲೇಜುಗಳಲ್ಲಿ ಲ್ಯಾಮ್ಡಾ ಯೋಜನೆ ಜಾರಿಗೆ ತರಲು ಚಿಂತಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ಗಳಿಗೆ ದಾಖಲಾ ಗುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ರಾಜ್ಯಾದ್ಯಂತ ಸಾಕಷ್ಟು ಸೀಟುಗಳು ಭರ್ತಿಯಾಗದೆ ಖಾಲಿ ಉಳಿಯುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಉದ್ಯೋಗವನ್ನೂ ಒದಗಿಸುವುದು ಮುಖ್ಯವಾಗಿದೆ.
ಅದಕ್ಕಾಗಿ ಲ್ಯಾಮ್ಡಾ ಯೋಜನೆಯನ್ನು ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಜಾರಿಗೆ ತರುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ. ಈ ಯೋಜನೆಯಡಿ ಶಿಕ್ಷಣ ನೀಡು ವುದು ಮಾತ್ರವಲ್ಲದೇ, ಉದ್ಯೋಗದ ಭರವಸೆಯನ್ನೂ ನೀಡಿ ಶಿಕ್ಷಣದ ನಂತರ ಉದ್ಯೋಗ ಒದಗಿಸಲಾಗುವುದು ಎಂದರು. ಯುವಕ-ಯುವತಿಯರಿಗೆ ಉದ್ಯೋಗ ಮುಖ್ಯವಾದರೆ, ಸಂಸ್ಥೆಗಳಿಗೆ ಕೆಲಸಗಾರರ ಅವಶ್ಯಕತೆಯೂ ಇರುತ್ತದೆ. ಲ್ಯಾಮ್ಡಾ ಯೋಜನೆಯಡಿ ಇಬ್ಬರಿಗೂ ಅನುಕೂಲಕ್ಕಾಗಿ ಶ್ರಮಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ