Threat: ಗೋಲ್ ಗುಂಬಜ್ನ ನಕ್ಕರ್ ಖಾನಾ ಮ್ಯೂಸಿಯಂಗೆ ಬಾಂಬ್ ಬೆದರಿಕೆ
Team Udayavani, Jan 6, 2024, 11:54 AM IST
ವಿಜಯಪುರ: ನಗರದಲ್ಲಿರುವ ಭಾರತೀಯ ಪುರಾತತ್ವ ಇಲಾಖೆ ಆಧೀನದ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಹಾಕಲಾಗಿದೆ.
morgue999lol ನಿಂದ ಬಂದಿರೋ ಇಮೇಲ್ [email protected] ಸೇರಿದಂತೆ ನೂರಕ್ಕೂ ಅಧಿಕ ಬಾಂಬ್ ಬೆದರಿಕೆಯ ಸಂದೇಶವನ್ನೊಳಗೊಂಡ ಇ-ಮೇಲ್ ಗಳು ಬಂದಿವೆ ಎನ್ನಲಾಗಿದೆ.
ಭಾರತೀಯ ಪುರಾತತ್ವ ಇಲಾಖೆಯ ಆಧೀನಲ್ಲಿರುವ ಮ್ಯೂಸಿಯಂಗಳಿಗೆ ಬಾಂಬ್ ಇಟ್ಟಿರೋ ಬೆದರಿಕೆ ಬಂದಿದ್ದು, ಮ್ಯೂಸಿಯಂಗಳಲ್ಲಿ ಬಹು ಸ್ಫೋಟಕಗಳನ್ನು ಕಾಣದಂತೆ ಇಟ್ಟಿದ್ದೇವೆ ಎಂದು ಬೆದರಿಕೆ ಸಂದೇಶದಲ್ಲಿ ಹೇಳಲಾಗಿದೆ.
ನಾವು ಕಾಣದಂತೆ ಇರಿಸಿರುವ ಸ್ಫೋಟಕಗಳು ಬೆಳಿಗ್ಗೆ ಸ್ಟೋಟಗೊಂಡು, ಒಳಗಿದ್ದವರೆಲ್ಲಾ ಸಾವನ್ನಪ್ಪುತ್ತಾರೆ. ನಾವು Terrozers111 ಗ್ರೂಪ್ ನವರು ಎಂದು ಮೇಲ್ ನಲ್ಲಿ ಬರೆಯಲಾಗಿದೆ.
ನಮ್ಮ ಗ್ರೂಪ್ ಹೆಸರನ್ನು ಮಾದ್ಯಮಕ್ಕೆ ನೀಡಿದರೂ ನನ್ನ ಕೃತ್ಯ ನಿಲ್ಲದು ಎಂದು ಬರೆದಿದ್ದಾರೆ.
ಮುಂಜಾಗೃತಾ ಕ್ರಮವಾಗಿ ನಿನ್ನೆ ತಡರಾತ್ರಿಯಿಂದ ಗೋಲ ಗುಮ್ಮಟ ಆವರಣದಲ್ಲಿರುವ ನಕ್ಕರ್ ಖಾನಾ ಪಾರಂಪರಿಕ ವಸ್ತುಸಂಗ್ರಹಾಲಯ ತಪಾಸಣೆ ನಡೆಸಲಾಗಿದೆ. ಬಾಂಬ್ ನಿಷ್ಕ್ರೀಯ ದಳದಿಂದ ಬಾಂಬ್ ಇರಿಸಿರುವ ಕುರಿತು ಸಿಬ್ಬಂದಿ ವಸ್ತುಸಂಗ್ರಹಾಲಯದಲ್ಲಿ ತಪಾಸಣೆ ನಡೆಸಿದ್ದಾರೆ. ಆದರೆ ವಸ್ತುಸಂಗ್ರಹಾಲಯದಲ್ಲಿ ಯಾವುದೇ ಸ್ಫೋಟಕದ ವಸ್ತುಗಳು ಪತ್ತೆಯಾಗಿಲ್ಲ. ಕಿಡಿಗೇಡಿಗಳು ಕೇವಲ ಜನರಲ್ಲಿ ಭಯ ಹುಟ್ಟಿಸುವುದಕ್ಕಾಗಿ ಇ-ಮೇಲ್ ಮಾಡಿ ಬಾಂಬ್ ಬೆದರಿಕೆ ಹಾಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ತಪಾಸಣೆ ಬಳಿಕ ಜ.6ರ ಶನಿವಾರ ಬೆಳಿಗ್ಗೆಯಿಂದ ಗೋಲ್ ಗುಂಬಜ್ ಹಾಗೂ ಆವರಣದಲ್ಲಿರುವ ವಸ್ತುಸಂಗ್ರಹಾಲಯಕ್ಕೆ ಪ್ರವಾಸಿಗರಿಗೆ ಸ್ಮಾರಕ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ಇದರ ಹೊರತಾಗಿಯೂ ಗೋಲ್ ಗುಂಬಜ್, ನಕ್ಕರ್ ಖಾನಾ ವಸ್ತುಸಂಗ್ರಹಾಲಯ ಪರಿಸರದಲ್ಲಿ ಮುಂಜಾಗೃತಾ ಕ್ರಮವಾಗಿ ಅದರ ಬಳಿ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ.
ಇ-ಮೇಲ್ ಬಂದಿರುವ ಕುರಿತು ಮೇಲಾಧಿಕಾರಿಗಳು ತನಿಖೆ ನಡೆಸಲಿದ್ದಾರೆಂದು ಹೆಸರು ಹೇಳಲು ಇಚ್ಛಿಸದ ಪುರಾತತ್ವ ಇಲಾಖೆ ಆಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್