ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಕರೆ: ದೂರು ದಾಖಲು
Team Udayavani, Dec 24, 2019, 3:05 AM IST
ಮಂಗಳೂರು: ನಗರದಲ್ಲಿ ಡಿ.19ರಂದು ನಡೆದ ಅಹಿತಕರ ಘಟನೆಗಳ ಬಳಿಕ ಈಗ ಕೆಲವು ಪೊಲೀಸ್ ಅಧಿಕಾರಿಗಳಿಗೆ ಮತ್ತು ಅವರ ಕುಟುಂಬದವರಿಗೆ ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬರುತ್ತಿದ್ದು, ಈ ಬಗ್ಗೆ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಪ್ರತಿಭಟನೆಗೆ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ 19ರಂದು ನಗರದ ಸ್ಟೇಟ್ ಬ್ಯಾಂಕ್ ಮತ್ತು ಬಂದರ್ ಪರಿಸರದ ನೆಲ್ಲಿಕಾಯಿ ರಸ್ತೆ, ಅಜೀಜುದ್ದೀನ್ ರಸ್ತೆ, ಮಿಷನ್ ರಸ್ತೆ ಮತ್ತಿತರ ಕಡೆ ಪ್ರತಿಭಟನಾಕಾರರು ಗುಂಪು ಸೇರಿದ್ದರಿಂದ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಈ ಸಂಘರ್ಷದಲ್ಲಿ ಗೋಲಿಬಾರ್ಗೆ ಇಬ್ಬರು ಸಾವನ್ನಪ್ಪಿದ್ದರು. ಘಟನೆ ಬಳಿಕ ಪೊಲೀಸ್ ಕಾರ್ಯಾಚರಣೆ ವಿರುದ್ಧ ಆಕ್ರೋಶಿತರಾದ ಕೆಲವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕೊಲೆ ಬೆದರಿಕೆ ಹಾಕಲು ಆರಂಭಿಸಿದ್ದಾರೆ. ಇದರಿಂದಾಗಿ ಕೆಲವು ಪೊಲೀಸ್ ಅಧಿಕಾರಿಗಳಿಗೂ ಗನ್ಮ್ಯಾನ್ ಭದ್ರತೆ ಒದಗಿಸಲಾಗಿದೆ.
ಕದ್ರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಾಂತಾರಾಮ ಮತ್ತು ಕುಟುಂಬದವರಿಗೆ ಹೆಚ್ಚಿನ ಬೆದರಿಕೆ ಕರೆಗಳು ಬರುತ್ತಿವೆ. ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶಾಂತಾರಾಮ ಮತ್ತವರ ಕುಟುಂಬದವರಿಗೆ ಜೀವ ಬೆದರಿಕೆಯನ್ನು ಹಾಕುತ್ತಿರುವ ಹಿನ್ನೆಲೆಯಲ್ಲಿ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ಸ್ಪೆಕ್ಟರ್ ಶಾಂತಾರಾಮ ಮತ್ತು ಇತರ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಅನಾಮಧೇಯ ಬೆದರಿಕೆ ಕರೆಗಳು ನಿರಂತರವಾಗಿ ಬರುತ್ತಿವೆ. ಹಾಗಾಗಿ ಕಿಡಿಗೇಡಿಗಳ ವಿರುದ್ಧ ಕೇಸು ದಾಖಲಿಸಲು ನಿರ್ಧರಿಸಲಾಗಿದೆ.
-ಡಾ| ಹರ್ಷ ಪಿ.ಎಸ್., ಪೊಲೀಸ್ ಕಮಿಷನರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D. K. Shivakumar-ಎಚ್ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್.ಅಶೋಕ್
Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ
Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
D. K. Shivakumar-ಎಚ್ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್.ಅಶೋಕ್
JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ
Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ
Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ