ಹಿಜಾಬ್ ತೀರ್ಪು ನೀಡಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಬೆದರಿಕೆ: ಆರೋಪಿ ಪೊಲೀಸರ ವಶಕ್ಕೆ
Team Udayavani, Mar 23, 2022, 12:17 PM IST
ಬೆಂಗಳೂರು: ಹಿಜಾಬ್ ಕುರಿತು ತೀರ್ಪು ನೀಡಿದ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ತಮಿಳುನಾಡು ಪೊಲೀಸರಿಂದ ಬಂಧನಕ್ಕೊಳಗಾದ ತೌಹಿದ್ ಜಮಾದ್ ಮುಸ್ಲಿಂ ಸಂಘಟನೆ ಮುಖಂಡನನ್ನು ವಿಧಾನಸೌಧ ಠಾಣೆ ಪೊಲೀಸರು 8 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.
ತಮಿಳುನಾಡಿನ ತಿರುಪತ್ತೂರು ಜೈಲಿನಿಂದ ಬಾಡಿ ವಾರೆಂಟ್ ಪಡೆದು ರೆಹಮತ್ ಉಲ್ಲಾನನ್ನು ಮಂಗಳವಾರ ನಗರಕ್ಕೆ ತಂದ ಪೊಲೀಸರು, 37ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಿ 8 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. ಶಾಲಾ-ಕಾಲೇಜು ತರಗತಿಯಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ಆದೇಶಿಸಿತ್ತು. ಅದರ ಬೆನ್ನಲ್ಲೇ ತಮಿಳುನಾಡಿನ ಮಧುರೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ತೌಹೀದ್ ಜಮಾದ್ ಮುಸ್ಲಿಂ ಸಂಘಟನೆ ಮುಖಂಡ ರೆಹಮತ್ ಉಲ್ಲಾ ಕರ್ನಾಟಕ ಹೈಕೋರ್ಟ್ನ ಹಿಜಾಬ್ ಕುರಿತು ತೀರ್ಪು ಉಲ್ಲೇಖೀಸಿ, ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಪರೋಕ್ಷವಾಗಿ ಬೇದರಿಕೆ ಹಾಕಿದ್ದ.
ಈ ಹೇಳಿಕೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೊ ಆಧರಿಸಿ ವಕೀಲ ಸುಧಾ ಕಟ್ವ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಎಫ್ ಐಆರ್ ದಾಖಲಾಗಿತ್ತು. ನ್ಯಾಯಮೂರ್ತಿಗಳಿಗೆ ಬೆದರಿಕೆ ಸಂಬಂಧ ತಮಿಳುನಾಡು ಪೊಲೀಸರು ರೆಹಮತ್ ಉಲ್ಲಾನನ್ನು ಬಂಧಿಸಿ ತಿರುಪತ್ತೂರು ಜೈಲಿಗೆ ಕಳುಹಿಸಿದ್ದರು. ಹೀಗಾಗಿ ವಿಧಾನಸೌಧ ಠಾಣೆ ಪೊಲೀಸರು, ಬಾಡಿ ವಾರೆಂಟ್ ಪಡೆದು ಆರೋಪಿಯನ್ನು ನಗರಕ್ಕೆ ಕರೆತಂದಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್