ಪ್ರಿಯತಮೆ ಬಯಸಿ ಸುಪಾರಿ ಕೊಟ್ಟು, ಭಯದಿಂದ ಆತ್ಮಹತ್ಯೆ ಮಾಡಿಕೊಂಡ!

ಪ್ರಾಣಾಪಾಯದಿಂದ ಪಾರಾಗಿ ಬಂದ ಪತಿ: ಮಹಿಳೆ ಸೇರಿ ಮೂವರು ಆರೋಪಿಗಳ ಬಂಧನ

Team Udayavani, Aug 20, 2022, 8:52 AM IST

1sucide

ಬೆಂಗಳೂರು: ಇದೊಂದು ವಿಚಿತ್ರ ಪ್ರಕರಣ. ಪ್ರಿಯತಮೆಯ ಪತಿಯನ್ನು ಕೊಲೆಗೈದು ಆಕೆಯ ಜತೆ ವಾಸಿಸಲು ಸುಪಾರಿ ನೀಡಿದ ಪ್ರಿಯಕರನೇ ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸುಪಾರಿ ಪಡೆದ ಆರೋಪಿಗಳು ಆತನನ್ನು ಕೊಲೆ ಮಾಡಿದ್ದೇವೆ ಎಂದು ಸಾಸ್‌ ಚೆಲ್ಲಿದ ಫೋಟೋ ವಾಟ್ಸ್‌ಆ್ಯಪ್‌ಗೆ ಕಳುಹಿಸಿ ನಂಬಿಸಿದ್ದರಷ್ಟೇ. ಅಸಲಿಗೆ ಆತ ಕೊಲೆಯೇ ಆಗಿರಲಿಲ್ಲ. ಆದರೆ, ಪ್ರಿಯತಮೆಗಾಗಿ ಸುಪಾರಿ ಕೊಟ್ಟ ಪ್ರಿಯಕರ ಆತ್ಮಹತ್ಯೆಗೆ ಶರಣಾಗಿದ್ದ.

ಇಂತದ್ದೊಂದು ಪ್ರಕರಣ ಪೀಣ್ಯ ಪೊಲೀಸ್‌ ಠಾಣೆಯಲ್ಲಿ ನಡೆದಿದೆ. ಸುಪಾರಿ ಕೊಡಲು ಪ್ರೇರೇಪಣೆ ನೀಡಿದ್ದ ಮಹಿಳೆ ಹಾಗೂ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ದೊಡ್ಡಬಿದರಕಲ್ಲು ನಿವಾಸಿ ಪಲ್ಲವಿ, ಹರೀಶ್‌, ಮುಗಿಲನ್‌, ಅಮ್ಮಜಮ್ಮ ಬಂಧಿತರು. ಪಲ್ಲವಿ ಪ್ರಿಯಕರ ಹಿಮವಂತ್‌ ಆತ್ಮಹತ್ಯೆ ಮಾಡಿಕೊಂಡವ. ಅಪಹರಣಕ್ಕೊಳಗಾದರೂ ಪ್ರಾಣಾಪಾಯದಿಂದ ಪರಾರಾದವರು ಪಲ್ಲವಿ ಪತಿ ನವೀನ್‌ಕುಮಾರ್‌.

ಇದನ್ನೂ ಓದಿ:ಭೀಕರ ರಸ್ತೆ ಅಪಘಾತ ; ತೀರ್ಥಯಾತ್ರೆಗೆ ತೆರಳಿದ್ದ 7 ಮಂದಿ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಘಟನೆ ಹಿನ್ನೆಲೆ: ನವೀನ್‌ ಕುಮಾರ್‌ ಚೊಕ್ಕಸಂದ್ರ ದಲ್ಲಿ ವಿಲ್ಲಿಂಗ್‌ ಫ್ಯಾಕ್ಟರಿ ನಡೆಸಿಕೊಂಡಿದ್ದಾರೆ. ಇದರ ಜತೆಗೆ ಕಾರು ಚಾಲನೆ ವೃತ್ತಿಯನ್ನು ಮಾಡುತ್ತಿದ್ದರು. ದೊಡ್ಡ ಬಿದರಕಲ್ಲು ಬಳಿ ಪತ್ನಿ ಪಲ್ಲವಿ ಹಾಗೂ ಇಬ್ಬರು ಮಕ್ಕಳ ಜತೆಗೆ ವಾಸಿಸುತ್ತಿದ್ದರು. ಪತ್ನಿಗೆ ಹಿಮ ವಂತ್‌ ಎಂಬಾತನ ಪರಿಚಯವಾಗಿತ್ತು. ಪರಿಚಯ ಪ್ರೇಮಾಂಕುರಕ್ಕೆ ತಿರುಗಿತ್ತು. ನಂತರ ಪತಿ ನವೀನ್‌ನನ್ನು ಕೊಲೆ ಮಾಡಿ ಇಬ್ಬರು ಜತೆಯಾಗಿ ವಾಸಿಸಲು ಸಂಚು ರೂಪಿಸಿದ್ದರು. ಅದರಂತೆ ನವೀನ್‌ ಕೊಲೆಗೆ ಮೂವರಿಗೆ ಹಿಮವಂತ್‌ ಸುಪಾರಿ ಕೊಟ್ಟಿದ್ದ. ಅದರಂತೆ ಮೂವರು ಆರೋಪಿಗಳು ತಮಿಳು ನಾಡಿಗೆ ಟ್ರಿಪ್‌ ಹೊಗಬೇಕೆಂದು ಹೇಳಿ ನವೀನ್‌ ಕುಮಾರ್‌ ಕಾರು ಬುಕ್‌ ಮಾಡಿದ್ದರು. ಕಾರಿನಲ್ಲಿ ತಮಿಳುನಾಡಿಗೆ ಹೋಗುತ್ತಿದ್ದಂತೆ ನವೀನ್‌ಗೆ ಬೆದರಿಸಿ ಅಪಹರಿಸಿದ್ದರು.

ನವೀನ್‌ನನ್ನು ಕೊಲೆ ಮಾಡಲು ಹೆದರಿದ ಹಂತಕರು, ಆತನಿಗೆ ಮದ್ಯಪಾನ ಮಾಡಿಸಿ ಆತನ ಮೈ ಮೇಲೆ ಸಾಸ್‌ ಚೆಲ್ಲಿ ಅದರ ಫೋಟೋವನ್ನು ಹಿಮವಂತ್‌ಗೆ ಕಳುಹಿಸಿ ಕೊಲೆ ಮಾಡಿರುವುದಾಗಿ ಹೇಳಿದ್ದರು. ನವೀನ್‌ ಕುಮಾರ್‌ ಮೊಬೈಲ್‌ ಕೆಲ ದಿನಗಳಿಂದ ಸ್ವಿಚ್ಛ್‌ಆಫ್ ಆಗಿರುವುದನ್ನು ಗಮನಿಸಿದ ಅವರ ಸಹೋದರ ಪೀಣ್ಯ ಪೊಲೀಸ್‌ ಠಾಣೆಯಲ್ಲಿ ನವೀನ್‌ ನಾಪತ್ತೆಯಾಗಿರುವುದಾಗಿ ದೂರು ನೀಡಿದ್ದರು. ಇತ್ತ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗುತ್ತಿದ್ದಂತೆ ಆತಂಕಗೊಂಡ ಹಿಮವಂತ್‌ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ವಿಚಾರ ತಿಳಿದ ಸುಪಾರಿ ಹಂತಕರು ನವೀನ್‌ನನ್ನು ಬಿಟ್ಟು ಕಳುಹಿಸಿದ್ದಳು. ಇದಾದ ಬಳಿಕ ನವೀನ್‌ ಮನೆಗೆ ವಾಪಸ್ಸಾಗಿ, ಆರೋಪಿಗಳು ಅಪಹರಣ ಮಾಡಿರುವ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದರು.

ಪೊಲೀಸರು ಅನುಮಾನದ ಮೇರೆಗೆ ಪಲ್ಲವಿಯನ್ನು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದೀಗ ಪಲ್ಲವಿ ಹಾಗೂ ಸುಪಾರಿ ಪಡೆದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.