ವಿಕಾಸಸೌಧದಲ್ಲೇ ಕೆಲಸದ ಡೀಲ್
Team Udayavani, Jan 16, 2019, 12:30 AM IST
ಬೆಂಗಳೂರು: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ 24ಲಕ್ಷ ರೂ. ಪಡೆದು ನಾಲ್ವರಿಗೆ ವಂಚಿಸಿದ್ದ ಆರೋಪ ಪ್ರಕರಣದಲ್ಲಿ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಉಪಕಾರ್ಯದರ್ಶಿ ಸೇರಿದಂತೆ ಮೂವರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಗ್ಯ ಇಲಾಖೆ ಉಪಕಾರ್ಯದರ್ಶಿ ರಾಮಚಂದ್ರಯ್ಯ, ಅನುದಾನಿತ ಪಿಯು ಕಾಲೇಜಿನ ಉಪನ್ಯಾಸಕ ದೇವರಾಜ್, ಖಾಸಗಿ ಶಾಲಾ ಶಿಕ್ಷಕ ಲಕ್ಷ್ಮೀನಾರಾಯಣ ಬಂಧಿತರು. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ದೇವರಾಜು ಅರಸು ನಿಗಮದಲ್ಲಿ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಹುದ್ದೆ ಕೊಡಿಸುವುದಾಗಿ ಹೇಳಿ ಚನ್ನಪಟ್ಟಣ ತಾಲೂಕಿನ ಶ್ರೀಕಂಠಯ್ಯ ಸೇರಿದಂತೆ ನಾಲ್ವರಿಂದ ತಲಾ 6 ಲಕ್ಷ ರೂ.ಗಳಂತೆ 24 ಲಕ್ಷ ರೂ.ಪಡೆದು ರಾಮಚಂದ್ರಯ್ಯ, ಲಕ್ಷ್ಮೀ ನಾರಾಯಣ ವಂಚಿಸಿರುವ ಆರೋಪ ಪ್ರಕರಣ ಸಂಬಂಧ, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ ಆರೋಪಿ ದೇವರಾಜ್ ಬಳಿ 2.5 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ವಿಕಾಸಸೌಧದಲ್ಲಿಯೇ ಲಂಚದ ಹಣ ಪಡೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ