ಕರಾವಳಿ,ಪಶ್ಚಿಮಘಟ್ಟದಲ್ಲಿ ಮೂರು ದಿನ ಭಾರಿ ಮಳೆ ಸಾಧ್ಯತೆ
Team Udayavani, Jul 19, 2021, 4:15 PM IST
ಧಾರವಾಡ : ಉತ್ತರ ಕರ್ನಾಟಕದ ಜು.19 ರಿಂದ 21 ರ ಹವಾಮಾನ ಮುನ್ಸೂಚನೆ ಲಭಿಸಿದ್ದು, ಮುಂದಿನ ಮೂರು ದಿನಗಳಲ್ಲಿ ಕರಾವಳಿ/ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆ (30-75 ಮಿ.ಮೀ) ಮುಂದುವರೆ ಯುವ ಸಾಧ್ಯತೆ ಇದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯ ದ ಹವಾಮಾನ ಅಧ್ಯಯನ ವಿಭಾಗ ತಿಳಿಸಿದೆ.
ಇದಲ್ಲದೇ ಉತ್ತರ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಸಾಧಾರಣೆ ಮಳೆ(5-25 ಮಿ.ಮೀ) ಸಾಧ್ಯತೆಯಿದ್ದು, ಹವಾಮಾನ ತಂಪಾದ ಮತ್ತು ಮೋಡಗಳಿಂದ ಕೂಡಿರುತ್ತದೆ. ಈಗಾಗಲೇ ಕಳೆದ 24 ಗಂಟೆಗಳಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣೆ (10-25 ಮಿ.ಮೀ)
ಮಳೆಯಾಗಿದ್ದು, ಉತ್ತರ ಕನ್ನಡದಲ್ಲಿ ಗರಿಷ್ಠ 44 ಮಿ.ಮೀ ಮತ್ತು ಯಾದಗಿರಿ ಜಿಲ್ಲೆಯಲ್ಲಿ 36 ಮಿ.ಮೀಯಷ್ಟು ಮಳೆ ಸುರಿದಿದೆ. ಮೋಡಗಳಿಂದ ಆವೃತವಾಗಿ ತಂಪಾದ ಹವಾಮಾನವು ಬೆಳೆಗಳಲ್ಲಿ ಕೀಟ-ರೋಗಗಳನ್ನು ಪ್ರೋತ್ಸಾಹಿಸುವ ಕಾರಣ ಬೆಳೆಗಳ ಎಲೆಗಳು ಹಳದಿ ಲಕ್ಷಣಗಳನ್ನು ತೋರಿಸುತ್ತವೆ. ಹೀಗಾಗಿ ರೋಗ ಹಾಗೂ ಕೀಟಬಾಧೆ ನಿಯಂತ್ರಣಕ್ಕಾಗಿ ರೈತರು ಅಗತ್ಯ ಕ್ರಮ ಕೈಗೊಳ್ಳುವಂತೆ ಕೃಷಿ ವಿವಿಯ ಹವಾಮಾನ
ವಿಭಾಗವು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ