ಕರಾವಳಿಯಲ್ಲಿ 3 ಸೈನಿಕ ತರಬೇತಿ ಶಾಲೆ


Team Udayavani, Jun 24, 2022, 6:40 AM IST

thumb 2 mili

ಸಾಂದರ್ಭಿಕ ಚಿತ್ರ

ಕಾರವಾರ: ಸರಕಾರ ಸೈನಿಕ ತರಬೇತಿ ಶಾಲೆಗಳನ್ನು ತೆರೆಯಲು ಅತ್ಯಂತ ಉತ್ಸಾಹ ತೋರಿದ್ದು, ಹಿಂದುಳಿದ ವರ್ಗಗಳ ಮತ್ತು ಪರಿಶಿಷ್ಟ ಜಾತಿ ಯುವಕರನ್ನು ಸೈನ್ಯಕ್ಕೆ ಸೇರಿಸಲು ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಕರಾವಳಿಯಲ್ಲಿ ಮೂರು ಸೈನಿಕ ತರಬೇತಿ ಶಾಲೆಗಳು ಕಾರ್ಯಾರಂಭ ಮಾಡಲಿವೆ.

ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀನಿವಾಸ ಪೂಜಾರಿ ಅವರು ಸಲ್ಲಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಿರುವ ಸರಕಾರ, ದಕ್ಷಿಣ ಕನ್ನಡದಲ್ಲಿ ರಾಣಿ ಅಬ್ಬಕ್ಕ ಸೈನಿಕ ಶಾಲೆ, ಉಡುಪಿಯಲ್ಲಿ ಕೋಟಿ ಚೆನ್ನಯ್ಯ ಅವಳಿ ವೀರಪುರುಷ ಸೈನಿಕರ ಶಾಲೆ ಹಾಗೂ ಉತ್ತರಕನ್ನಡದಲ್ಲಿ ಹೆಂಜಾ ನಾಯ್ಕ ಸೈನಿಕ ಶಾಲೆ ತೆರೆಯಲು ಮುಂದಾಗಿದ್ದು, ಈ ಬಗ್ಗೆ  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ವಿ.ಅಕ್ಕಮಹಾದೇವಿ ಆದೇಶ ಹೊರಡಿಸಿದ್ದಾರೆ.

ಈ ಸೈನಿಕ ಶಾಲೆಗಳಲ್ಲಿ ಸೇನಾ ಆಯ್ಕೆ ಪೂರ್ವ ತರಬೇತಿ, ಸಿದ್ಧತೆ, ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತ ಊಟ-ವಸತಿಯೊಂದಿಗೆ ನೀಡಲು ಸರಕಾರ ನಿರ್ಧರಿಸಿದೆ. ಈ ಶಾಲೆಗಳಿಗೆ ಒಂದು ವರ್ಷಕ್ಕೆ ತಗಲುವ ವೆಚ್ಚ 67.50 ಲಕ್ಷ ರೂ.ಗಳನ್ನು ಸರಕಾರ ಮಂಜೂರು ಮಾಡಿದೆ.  ಸೇನೆ ಸೇರಬಯಸುವ ಯುವಕರು ಈ ಶಾಲೆಗಳಲ್ಲಿ ತರಬೇತಿ ಪಡೆಯಬಹುದು.

ನೇವಿ ತರಬೇತಿ ಶಾಲೆ ಬೇಕಿತ್ತು :

ಈ ನಡುವೆ ಸೈನಿಕ ಶಾಲೆಯಲ್ಲಿ ನೇವಿಗೆ ಸಂಬಂಧಿಸಿದ ಹುದ್ದೆಗಳಿಗೆ ಪೂರ್ವ ತರಬೇತಿ ನೀಡುವ ಶಾಖೆ ತೆರೆಯಬೇಕು ಎಂಬ ಆಗ್ರಹವೂ ಕೇಳಿಬಂದಿದೆ. ಸೀಬರ್ಡ್‌ ನೌಕಾನೆಲೆ ಯೋಜನೆ ಬೃಹತ್ತಾಗಿ ಬೆಳೆದಿದೆ. ಯುದ್ಧ ನೌಕೆಗಳಲ್ಲಿ ಕೆಲಸ ನಿರ್ವಹಿಸುವ ತಾಂತ್ರಿಕ ಮತ್ತು ತಾಂತ್ರಿಕೇತರ ತರಬೇತಿಗಳನ್ನು, ಡಾರ್ಕ್‌ ಯಾರ್ಡ್‌ನಲ್ಲಿ ಕೆಲಸ ಮಾಡುವ ಪೂರ್ವ ತರಬೇತಿ ನೀಡುವಂತಾದರೆ ಈ ಸೈನಿಕ ಶಾಲೆಗಳ ತರಬೇತಿ ಉದ್ದೇಶ ಯಶಸ್ವಿಯಾಗಲಿದೆ.

ನೌಕಾಪಡೆಯಲ್ಲಿ ಹೆಚ್ಚು ಉದ್ಯೋಗದ ಸಾಧ್ಯತೆಗಳಿವೆ. ಮರೀನ್‌ ಡ್ರೈವರ್, ನೌಕಾ ಚಾಲನೆ, ಸೇಲರ್ ಮತ್ತು ಈಜು ತರಬೇತಿ, ಜಲ ಸಾಹಸ ಕ್ರೀಡೆಗಳನ್ನು ನೇವಿಗೆ ಪೂರಕವಾಗಿ ಕಲಿಸುವ ಸೈನಿಕ ಶಾಲೆಯೂ ಬೇಕಿದೆ. ಈ ನಿಟ್ಟಿನಲ್ಲಿ ಸರಕಾರ ನೌಕಾನೆಲೆಗೆ ಬೇಕಾದ ತರಬೇತಿ ಕೋರ್ಸ್‌ ಆರಂಭಿಸಬೇಕಿದೆ. ಸದ್ಯ ಇಂಥ ತರಬೇತಿ ಶಾಲೆಗಳಿರುವುದು ದೂರದ ಮುಂಬಯಿ, ಚೆನ್ನೈ ಹಾಗೂ ಕೇರಳದಲ್ಲಿ. ಹೀಗಾಗಿ ರಾಜ್ಯ ಸರಕಾರ ಈ ತರಬೇತಿ ಶಾಖೆ-ಕೋರ್ಸ್‌ಗಳನ್ನು ಇಲ್ಲಿನ ಪದವಿ ಹಾಗೂ ಎಂಜಿನಿಯರಿಂಗ್‌ ಕಾಲೇಜು ಕಟ್ಟಡಗಳನ್ನೇ ಬಳಸಿ ಆರಂಭಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಏನಿದರ ಉಪಯೋಗ? :

ಕರಾವಳಿ ಜಿಲ್ಲೆಗಳಿಂದ ಸೈನ್ಯಕ್ಕೆ ಸೇರಲು ಯುವಕರನ್ನು ಪ್ರೇರೇಪಿಸುವುದು ಮೊದಲ ಉದ್ದೇಶ.  ಕೇಂದ್ರ ಸರಕಾರದ ಹೊಸ ಯೋಜನೆ  “ಅಗ್ನಿಪಥ’ಕ್ಕೆ ಯುವ ಪಡೆಯನ್ನು ಪ್ರೇರೇಪಿಸುವುದು ಹಾಗೂ ಮೂರು ಜಿಲ್ಲೆಗಳ ಇತಿಹಾಸದಲ್ಲಿ ಹೆಸರು ಮಾಡಿದ ಅಬ್ಬಕ್ಕ, ಕೋಟಿ ಚೆನ್ನಯ್ಯ ಹಾಗೂ ಹೆಂಜಾ ನಾಯ್ಕರ ಹೆಸರು ಉಳಿಸುವುದು ಇತರ ಉದ್ದೇಶಗಳಾಗಿವೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.