ವಿದ್ಯುತ್ ತಂತಿ ತೆರವು: ಮೂರು ತಿಂಗಳ ಗಡುವು
Team Udayavani, Feb 4, 2022, 6:39 AM IST
ಬೆಂಗಳೂರು: ರಾಜ್ಯಾದ್ಯಾಂತ ಶಾಲಾ-ಕಾಲೇಜುಗಳ ಬಳಿ ಹಾಗೂ ಅವುಗಳ ಕಟ್ಟಡಗಳ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಗಳನ್ನು ಮೂರು ತಿಂಗಳಲ್ಲಿ ತೆರವುಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣಾ ನಿಗಮ (ಕೆಪಿಟಿಸಿಎಲ್)ಕ್ಕೆ ಹೈಕೋರ್ಟ್ ಆದೇಶ ನೀಡಿದೆ.
ಈ ವಿಚಾರವಾಗಿ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುತಾಜ್ ಅವಸ್ಥಿ ಹಾಗೂ ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಈ ನಿರ್ದೇಶನ ನೀಡಿತು.
ವಿಚಾರಣೆ ವೇಳೆ ಕೆಪಿಟಿಸಿಎಲ್ ಪರ ವಕೀಲ ಶ್ರೀರಂಗ ವಾದ ಮಂಡಿಸಿ, ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳ ಬಳಿ ಹಾದು ಹೋಗಿರುವ ವಿದ್ಯುತ್ ಮಾರ್ಗಗಳನ್ನು ಗುರುತಿಸುವ ಮತ್ತು ಅವುಗಳನ್ನು ತೆರವುಗೊಳಿಸುವ ಕಾರ್ಯವನ್ನು ಎಸ್ಕಾಂಗಳು ಆರಂಭಿಸಿವೆ. ಸುಮಾರು 5 ಸಾವಿರಕ್ಕೂ ಅ ಧಿಕ ಸ್ಥಳಗಳಲ್ಲಿ ಶಾಲಾ-ಕಾಲೇಜುಗಳ ಬಳಿ ವಿದ್ಯುತ್ ತಂತಿ ಹಾದು ಹೋಗಿರುವುದನ್ನು ಗುರುತಿಸಲಾಗಿದೆ, ಅವುಗಳನ್ನು ಹಂತ ಹಂತವಾಗಿ ತೆರವುಗೊಳಿಸಬೇಕಾಗುತ್ತದೆ, ಅದಕ್ಕಾಗಿ ಕನಿಷ್ಠ ನಾಲ್ಕೈದು ತಿಂಗಳು ಕಾಲಾವಕಾಶಬೇಕು ಎಂದರು.
ಕೆಪಿಟಿಸಿಎಲ್ ಪರ ವಕೀಲರ ಮನವಿ ಪರಿಗಣಿಸಿದ ನ್ಯಾಯಪೀಠ, ತೆರವು ಕಾರ್ಯ ಮುಂದುವರಿಸಿ, ಮುಂದಿನ ವಿಚಾರಣೆ ವೇಳೆ ವರದಿ ಸಲ್ಲಿಸಿ ಎಂದು ನಿರ್ದೇಶಿಸಿ ವಿಚಾರಣೆಯನ್ನು ಮಾ.11ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್