Tiger Claw Case: ಜಗ್ಗೇಶ್ಗೆ ನೀಡಿದ್ದ ನೋಟಿಸ್ಗೆ ತಡೆ
Team Udayavani, Oct 30, 2023, 8:34 PM IST
ಬೆಂಗಳೂರು: ಹುಲಿ ಉಗುರು ವಿಚಾರಕ್ಕೆ ಸಂಬಂಧಿಸಿ ರಾಜ್ಯಸಭಾ ಸದಸ್ಯ ಹಾಗೂ ಚಿತ್ರನಟ ಜಗ್ಗೇಶ್ ಅವರಿಗೆ ಅರಣ್ಯ ಇಲಾಖೆ ನೀಡಿದ್ದ ನೋಟಿಸ್ ಹಾಗೂ ಸರ್ಚ್ ವಾರಂಟ್ಗೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ಈ ಸಂಬಂಧ ಜಗ್ಗೇಶ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರಣ್ಯ ಇಲಾಖೆ ನೋಟಿಸ್ ಹಾಗೂ ಸರ್ಚ್ ವಾರಂಟ್ಗೆ ಮುಂದಿನ ವಿಚಾರಣೆವರೆಗೆ ತಡೆ ನೀಡಿತು.
ಅಕ್ಟೋಬರ್ 25ರಂದು ತಮ್ಮಲ್ಲಿ ಯಾವುದೇ ಹುಲಿ ಉಗುರು ಇದ್ದಲ್ಲಿ ಅರಣ್ಯ ಇಲಾಖೆಗೆ ಒಪ್ಪಿಸಬೇಕು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಆದಾದ ಒಂದು ಗಂಟೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ 14 ಅಧಿಕಾರಿಗಳು ಮನೆಗೆ ಭೇಟಿ ನೀಡಿ ಶೋಧನೆ ನಡೆಸಿದ್ದಾರೆ. ಹಲವು ವರ್ಷಗಳ ಹಿಂದೆ ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪರಿಶೀಲಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಈಗ ಶೋಧನೆ ನಡೆಸುವುದಕ್ಕೆ ಮುಂದಾಗಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.
ಈ ವೇಳೆ ಸರಕಾರದ ಪರ ವಕೀಲರು, ಹುಲಿ ಉಗುರು ನಾಶ ಮಾಡಲಿದ್ದಾರೆಂಬ ಮಾಹಿತಿ ಲಭ್ಯವಾಗಿತ್ತು. ಇದೇ ಕಾರಣಕ್ಕೆ ದಾಳಿ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡರು. ಇದಕ್ಕೆ ಆಕ್ರೋಶಗೊಂಡ ನ್ಯಾಯಪೀಠ, ನೋಟಿಸ್ ನೀಡಿದ ಒಂದು ತಾಸಿನಲ್ಲಿ ಯಾವ ಮೂಲಗಳು ನಿಮಗೆ ಮಾಹಿತಿ ನೀಡಿದವು ಎಂದು ಪ್ರಶ್ನಿಸಿತು. ಅರಣ್ಯ ಉತ್ಪನ್ನಗಳನ್ನು ವಶದಲ್ಲಿಟ್ಟುಕೊಳ್ಳುವುದು ಕಾನೂನು ಪ್ರಕಾರ ತಪ್ಪು. ಆದರೆ ಸರಕಾರ ಮಾಡಿರುವ ಪ್ರಕ್ರಿಯೆ ಸರಿಯಾದ ಕ್ರಮವಲ್ಲ. ಸಂಪೂರ್ಣ ಪ್ರಚಾರಕ್ಕಾಗಿ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ