ವಿಧಾನಪರಿಷತ್ಗೆ ತಿಪ್ಪೇಸ್ವಾಮಿ ನಾಮ ನಿರ್ದೇಶನ
Team Udayavani, Jan 26, 2019, 1:15 AM IST
ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ವಿಶೇಷಾಧಿಕಾರಿ ತಿಪ್ಪೇಸ್ವಾಮಿ ಅವರನ್ನು ವಿಧಾನಪರಿಷತ್ಗೆ ನಾಮ ನಿರ್ದೇಶನ ಮಾಡುವ ರಾಜ್ಯ ಸರ್ಕಾರದ ಶಿಫಾರಸ್ಸಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ರಾಜ್ಯಪಾಲರನ್ನು ಭೇಟಿ ಮಾಡಿ, ವಿಧಾನಪರಿಷತ್ನ ನಾಮಕರಣ ಸ್ಥಾನಕ್ಕೆ ತಿಪ್ಪೇಸ್ವಾಮಿ ಅವರ ಹೆಸರನ್ನು ಶಿಫಾರಸು ಮಾಡಿರುವ ಕುರಿತು ಮಾಹಿತಿ ನೀಡಿದರು.
ರಾಜ್ಯಪಾಲರು ಅದಕ್ಕೆ ಒಪ್ಪಿಗೆಸೂಚಿಸಿ ದರು. ಬಳಿಕ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು, ತಿಪ್ಪೇಸ್ವಾಮಿಯವರನ್ನು ವಿಧಾನಪರಿಷತ್ಗೆ ನಾಮನಿರ್ದೇಶನ ಮಾಡುವ ಶಿಫಾರಸಿಗೆ ರಾಜ್ಯಪಾಲರ ಒಪ್ಪಿಗೆ ದೊರೆತಿದೆ ಎಂದು ಹೇಳಿದರು.
ಪ್ರಸ್ತುತ ಸಚಿವ ರೇವಣ್ಣ ಅವರ ವಿಶೇಷ ಅಧಿಕಾರಿಯಾಗಿರುವ ತಿಪ್ಪೇಸ್ವಾಮಿ ಅವರು ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಹಾಗೂ ಪ್ರಧಾನಿಯಾಗಿದ್ದಾಗಲೂ ವಿಶೇಷ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ದೇವೇಗೌಡರ ಕುಟುಂಬಕ್ಕೆ ಆಪ್ತರೂ ಆಗಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ