ವಿಧಾನಸೌಧದಲ್ಲಿ ಟಿಪ್ಪು ಜಯಂತಿ


Team Udayavani, Nov 10, 2017, 9:47 AM IST

10-11.jpg

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ಟಿಪ್ಪು ಸುಲ್ತಾನ್‌ ಜಯಂತಿಯ ಪ್ರಮುಖ ಕಾರ್ಯಕ್ರಮ ವಿಧಾನಸೌಧ ಬಾಂಕ್ವೆಟ್‌ ಸಭಾಂಗಣದಲ್ಲಿ ನಡೆಯಲಿದೆ. 

ಸಂಜೆ 6.30ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ವಿಧಾನಪರಿಷತ್‌ ಸಭಾಪತಿ 
ಡಿ.ಎಚ್‌.ಶಂಕರಮೂರ್ತಿ, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌, ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಹಾಗೂ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಸದಸ್ಯ ಪಿ.ಸಿ.ಮೋಹನ್‌ ಅವರ ಹೆಸರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಧಾನಸಭೆ ಸ್ಪೀಕರ್‌ ಕೆ.ಬಿ.ಕೋಳಿವಾಡ, ಸಚಿವರಾದ ರೋಷನ್‌ಬೇಗ್‌, ಕೆ.ಜೆ.ಜಾರ್ಜ್‌, ರಾಮಲಿಂಗಾರೆಡ್ಡಿ, ಉಮಾಶ್ರೀ ಸೇರಿ ಅಲ್ಪಸಂಖ್ಯಾತರ ಪರವಾಗಿ ಸಚಿವರಾದ
ತನ್ವೀರ್‌ ಸೇs…, ಯು.ಟಿ.ಖಾದರ್‌, ರಾಜ್ಯಸಭೆ ಸದಸ್ಯ ರೆಹಮಾನ್‌ ಖಾನ್‌, ದೆಹಲಿಯಲ್ಲಿ ಸರ್ಕಾರದ ಪ್ರತಿನಿಧಿ ಸಲೀಂ ಅಹಮದ್‌, ಶಾಸಕರಾದ ಎನ್‌.ಎ.ಹ್ಯಾರೀಸ್‌, ಜಮೀರ್‌ ಅಹಮದ್‌, ಪರಿಷತ್‌ ಸದಸ್ಯರಾದ ಸಿ.ಎಂ. ಇಬ್ರಾಹಿಂ, ರಿಜ್ವಾನ್‌ ಹರ್ಷದ್‌, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಸೀರ್‌ ಅಹಮದ್‌, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಅಧ್ಯಕ್ಷ ಎಂ.ಎ.ಗಫ‌ೂರ್‌ ಅವರನ್ನು ಆಹ್ವಾನಿಸಲಾಗಿದೆ. ಆಮೀರ್‌ ಎ ಷರಿಯತ್‌ ನ ಹಜರತ್‌ ಮೌಲಾನಾ ಸಗೀರ ಅಹ್ಮದ್‌ ಖಾನ ಸಾಹೇಬ್‌ ರಷಾದಿ ಹಾಗೂ ಉರಿ ಲಿಂಗಪೆದ್ದಿಗಳ ಮಠದ ಜ್ಞಾನಪ್ರಕಾಶ್‌ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಜೆ.ಆರ್‌.ಲೋಬೋ ವಿಶೇಷ ಆಹ್ವಾನಿತರಾಗಿದ್ದಾರೆ. ಡಾ.ಎಲ್‌.ಹನುಮಂತಯ್ಯ ಟಿಪ್ಪು ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಕೆನರಾ ಕ್ರಿಶ್ಚಿಯನ್ಸ್‌ ವೇದಿಕೆ ಖಂಡನೆ
ಮಂಗಳೂರು: ಕ್ರೈಸ್ತರ ಮೇಲೆ ಕ್ರೌರ್ಯ ನಡೆಸಿದ ಟಿಪ್ಪು ವಿನ ಜಯಂತಿಯನ್ನು ಆಚರಿಸಲು ರಾಜ್ಯ ಸರಕಾರ ಮುಂದಾಗಿರುವುದು ಖಂಡನೀಯ. ಟಿಪ್ಪುವಿನ ಕ್ರೌರ್ಯಕ್ಕೆ ಒಳಗಾದ ಕೆನರಾ ಕ್ರೈಸ್ತರ ಸಮುದಾಯದಿಂದಲೇ ಬಂದಿ ರುವ ಶಾಸಕರಾದ ಜೆ.ಆರ್‌. ಲೋಬೋ, ಐವನ್‌ ಡಿ’ಸೋಜಾ ಮತ್ತು ಸಂಸದ ಆಸ್ಕರ್‌ ಫ‌ರ್ನಾಂಡಿಸ್‌ ಟಿಪ್ಪುವಿನ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು. ತಪ್ಪಿದಲ್ಲಿ ಮುಂದಿನ ಚುನಾವಣೆಯಲ್ಲಿ ಟಿಪ್ಪುವಿನ ಹೆಸರಿನಲ್ಲೇ ಮತ ಯಾಚನೆ ನಡೆಸಲಿ ಎಂದು ಕೆನರಾ ಕ್ರಿಶ್ಚಿಯನ್ಸ್‌ ವೇದಿಕೆ ಸವಾಲು ಹಾಕಿದೆ.

ಆಮಂತ್ರಣ ಪತ್ರಿಕೆ: ಹೆಸರಿಗೆ ಕೊಕ್‌
ಬೆಂಗಳೂರು: ಧಾರವಾಡ ಜಿಲ್ಲಾಡಳಿತದಿಂದ ನಡೆಯಲಿರುವ  ಟಿಪ್ಪು ಜಯಂತಿ ಆಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ಸಂಸದ ಪ್ರಹ್ಲಾದ ಜೋಶಿ ಹಾಗೂ ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್‌ ಅವರ ಹೆಸರನ್ನು ಕೈಬಿಡಲಾಗಿದೆ. ಸಂಸದೆ ಶೋಭಾ ಕರಂದ್ಲಾಜೆ ಹಾಗೂ ವಿಧಾನ ಪರಿಷತ್‌ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌ ಅವರ ಹೆಸರನ್ನೂ ಚಿಕ್ಕ ಮಗಳೂರು ಜಿಲ್ಲಾಡಳಿತ ಕೈಬಿಟ್ಟಿದೆ. ತಮ್ಮ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸದಂತೆ ಈ ಹಿಂದೆಯೇ ಶೋಭಾ ಕರಂದ್ಲಾಜೆ ಹಾಗೂ ಕ್ಯಾ| ಗಣೇಶ್‌ ಕಾರ್ಣಿಕ್‌ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು.

ಬಿಜೆಪಿ ಅರ್ಜಿ ವಜಾ
ಚಿತ್ರದುರ್ಗ: ಟಿಪ್ಪು ಜಯಂತಿ ಅಂಗವಾಗಿ ಜಿಲ್ಲಾಡಳಿತ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಹಾಗೂ ನಿಷೇಧಾಜ್ಞೆ ತೆರವುಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯನ್ನು ಇಲ್ಲಿನ ಜಿಲ್ಲಾ ನ್ಯಾಯಾ ಲಯ ವಜಾಗೊಳಿಸಿದೆ. 

ಕಾನೂನು ಸುವ್ಯವಸ್ಥೆಗೆ ಧಕ್ಕೆತಂದರೆ ಕ್ರಮ
ಗೃಹ ಸಚಿವ ರಾಮಲಿಂಗಾರೆಡ್ಡಿ ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ಗುರುವಾರ ಸಭೆ ನಡೆಸಿದರು. ನಂತರ ಟಿಪ್ಪು ಜಯಂತಿ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಯಾರೇ ಮಾಡಿದರೂ ಎಷ್ಟೇ ದೊಡ್ಡವರಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಟಿಪ್ಪು ಜಯಂತಿ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲ ರೀತಿಯ ಭದ್ರತೆ ಕೈಗೊಳ್ಳಲಾಗಿದೆ. ಈ ಬಾರಿ ಟಿಪ್ಪು ಜಯಂತಿ ಸುಸೂತ್ರವಾಗಿ ನಡೆಯಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.