ನಾಳೆಯಿಂದ ವೈಭವದ 11ನೇ ಕುಂಭಮೇಳ


Team Udayavani, Feb 16, 2019, 12:20 AM IST

7.jpg

ಮೈಸೂರು: ದಕ್ಷಿಣ ಭಾರತದ ಪುಣ್ಯನದಿಗಳಾದ ಕಾವೇರಿ,ಕಪಿಲ ಮತ್ತು ಸ್ಫಟಿಕ ಸರೋವರಗಳ
ತ್ರಿವೇಣಿ ಸಂಗಮವಾದ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಿರುಮಕೂಡಲು
ಶ್ರೀಕ್ಷೇತ್ರದಲ್ಲಿ ಭಾನುವಾರದಿಂದ ಮೂರು ದಿನಗಳ ಕಾಲ 11ನೇ ಮಹಾ ಕುಂಭಮೇಳ ನಡೆಯಲಿದೆ.
ಪ್ರಪ್ರಥಮ ಬಾರಿಗೆ 1989ರಲ್ಲಿ ಕುಂಭಮೇಳ ಪ್ರಾರಂಭಿಸಿ, ಪ್ರತಿ ಮೂರು ವರ್ಷಗಳಿಗೊಮ್ಮೆ
ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿ ವಿಳಂಬಿ ನಾಮ ಸಂವತ್ಸರದಲ್ಲಿ 11ನೇ ಕುಂಭಮೇಳ
ಜರುಗಲಿದೆ.

17ರಂದು ಬೆಳಗ್ಗೆ 6 ಗಂಟೆಗೆ ಮಾಘ ಶುದ್ಧ ತ್ರಯೋದಶೀ ಪುಷ್ಯ ನಕ್ಷತ್ರ ಶ್ರೀ ಅಗಸೆöàಶ್ವರ ಸನ್ನಿಧಿ 
ಯಲ್ಲಿ ಅನುಜ್ಞೆ, ಪುಣ್ಯಾಹ, ಕಳಶ ಸ್ಥಾಪನೆ, ಗಣಹೋಮ, ಅಭಿಷೇಕ, ದೇವತಾರಾಧನೆ, ರಾಷ್ಟ್ರಾಶೀರ್ವಾ
ದ. ಸಂಜೆ 4ಕ್ಕೆ ಅಗ್ರತೀರ್ಥ ಸಂಗ್ರಹ ಸಮೇತಯಾಗಶಾಲಾ ಪ್ರವೇಶ, ಪುಣ್ಯಾಹ, ವಾಸ್ತುಹೋಮ 
ಗಳು ನಡೆಯಲಿದೆ. 18ರಂದು ಬೆಳಗ್ಗೆ 6ಕ್ಕೆ ಮಾಘ ಶುದ್ಧ   ಚತುರ್ದಶೀ ಆಶ್ಲೇಷ ನಕ್ಷತ್ರ, ಪುಣ್ಯಾಹ,
ನವಗ್ರಹಪೂಜೆ, ಜಪ, ನವಗ್ರಹ ಹೋಮ, ಪೂರ್ಣಾ ಹುತಿ. ಮಧ್ಯಾಹ್ನ 3.45ಕ್ಕೆ ಸುದರ್ಶನ
ಪೂಜೆ, ಹೋಮ, ಪೂರ್ಣಾಹುತಿ ನಡೆಯಲಿದೆ.

ಸ್ವಾಮೀಜಿಗಳ ಸ್ವಾಗತ: ಸಂಜೆ 4ಗಂಟೆಗೆ ಗುಂಜಾ ನರಸಿಂಹಸ್ವಾಮಿ ದೇವಸ್ಥಾನದಿಂದ ವಿವಿಧ
ಕಲಾತಂಡಗಳು, ಸ್ತಬಟಛಿಚಿತ್ರಗಳೊಂದಿಗೆ ಕುಂಭಮೇಳ ಲ್ಲಿ ಭಾಗವಹಿಸುವ ಸ್ವಾಮೀಜಿಗಳನ್ನು ಮೆರವಣಿಗೆಯಲ್ಲಿ ಕರೆದೊಯ್ಯಲಾಗುತ್ತದೆ.

ಗಂಗಾಪೂಜೆ ಮತ್ತು ದೀಪಾರತಿ: 19ರ ಮುಂಜಾನೆ 5.30ಕ್ಕೆ ಮಾಘಶುದಟಛಿ ವ್ಯಾಸ ಪೂರ್ಣಿಮಾ, ಪುಷ್ಯ  ನಕ್ಷತ್ರ, ಪುಣ್ಯಾಹ, ಸಪ್ತ ನದೀತೀರ್ಥ ಕಲಶ ಪೂಜೆ, ಹೋಮ, ಕುಂಭಲಗ್ನದಲ್ಲಿ ಪೂರ್ಣಾಹುತಿ, ತ್ರಿವೇಣಿ ಸಂಗಮದಲ್ಲಿ ಕಲಶತೀರ್ಥ ಸಂಯೋಜನೆ ಮಾಡಲಾಗುವುದು. ಪ್ರಾತಃಕಾಲ 9.35ರಿಂದ 9.50ರ ಮೀನಲಗ್ನ, ಬೆಳಗ್ಗೆ 11.30ರಿಂದ 12ಗಂಟೆಯ ವೃಷಭ ಲಗ್ನ, ಅಭಿಜಿನ್‌ ಮುಹೂರ್ತ, ವಿಧಿ
ಮುಹೂರ್ತ, ವೇದ ಮುಹೂರ್ತಗಳಲ್ಲಿ ಮಹೋದಯ ಪುಣ್ಯಸ್ನಾನ ನಡೆಯಲಿದೆ. ರಾತ್ರಿ 7ಕ್ಕೆ ವಾರಾ 
ಣಸಿ ಮಾದರಿಯಲ್ಲಿ ಸಂಗಮ ಸ್ಥಳದಲ್ಲಿ ಸಾರ್ವಜನಿಕ ಗಂಗಾಪೂಜೆ ಮತ್ತು ದೀಪಾರತಿ ಜರುಗಲಿದೆ.
ಜಿಟಿಡಿ ಕಾರ್ಯಕ್ರಮ ಉದ್ಘಾಟನೆ: 17ರಂದು ಬೆಳಗ್ಗೆ 8.30ಕ್ಕೆ ಅಗಸೆöàಶ್ವರ ಸ್ವಾಮಿ ಸನ್ನಿಧಿಯಲ್ಲಿ ಅನುಜ್ಞಾ ಕಾರ್ಯಕ್ರಮ, ಅಂಕುರಾರ್ಪಣೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಧಾನಸಭೆ ವಿರೋಧಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಭಾಗವಹಿಸಲಿದ್ದಾರೆ.

ಸಿಎಂ ಭಾಗಿ: 18ರಂದು ಬೆಳಗ್ಗೆ 11ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. 19ರಂದು ಮಧ್ಯಾಹ್ನ 12ಗಂಟೆಗೆ ನಡೆಯುವ ಧರ್ಮಸಭೆಯನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ.

ಬಟ್ಟೆ ಬದಲಿಸುವ ಕೋಣೆ,ಈಜುಗಾರರ ನಿಯೋಜನೆ
ಕುಂಭಮೇಳಕ್ಕೆ ಬರುವ ಮಹಿಳೆಯರು ಪುಣ್ಯಸ್ನಾನ ಮಾಡಿದ ನಂತರ ಬಟ್ಟೆ ಬದಲಿಸಲು ನದಿಯ ದಂಡೆ, ಮಜ್ಜನ ಮಾಡುವ ಜಾಗದಲ್ಲಿ 250ಕ್ಕೂ ಹೆಚ್ಚು ತಾತ್ಕಾಲಿಕ ಡ್ರೆಸ್ಸಿಂಗ್‌ ಕೋಣೆಗಳನ್ನು ನಿರ್ಮಿಸಲಾಗಿದೆ. ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಲು ನದಿಗೆ ಇಳಿಯುವ ಭಕ್ತರಿಗೆ ತೊಂದರೆಯಾದಲ್ಲಿ ಕೂಡಲೇ ರಕ್ಷಿಸಲು ನೂರಾರು ನುರಿತ ಈಜುಪಟುಗಳನ್ನು ನಿಯೋಜಿಸಲಾಗಿದೆ.

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.