ಡಿಕೆಶಿ ಪ್ರತಿಜ್ಞಾವಿಧಿಗೆ ಹೈಟೆಕ್‌ ಸ್ಪರ್ಶ; ವರ್ಚುವಲ್‌ನಲ್ಲಿ 10 ಲಕ್ಷ  ಜನರ ಸೇರ್ಪಡೆ ಗುರಿ


Team Udayavani, Jul 1, 2020, 6:15 AM IST

ಡಿಕೆಶಿ ಪ್ರತಿಜ್ಞಾವಿಧಿಗೆ ಹೈಟೆಕ್‌ ಸ್ಪರ್ಶ; ವರ್ಚುವಲ್‌ನಲ್ಲಿ 10 ಲಕ್ಷ  ಜನರ ಸೇರ್ಪಡೆ ಗುರಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಅವರು ಗುರುವಾರ ಅಧಿಕಾರ ಸ್ವೀಕರಿಸಲಿದ್ದು, ಇದು ವರ್ಚುವಲ್‌ ವ್ಯವಸ್ಥೆಯಲ್ಲಿ ವಿಶ್ವದಾಖಲೆ ಬರೆಯಲು ಸಜ್ಜಾಗಿದೆ.

ಬೆಂಗಳೂರಿನ ಪಕ್ಷದ ನೂತನ ಕಚೇರಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಸುಮಾರು 10 ಲಕ್ಷಕ್ಕೂ ಹೆಚ್ಚು ಮಂದಿ ಝೂಮ್‌ ಆ್ಯಪ್‌ ಮೂಲಕ ವೀಕ್ಷಿಸಲಿದ್ದಾರೆ ಎಂಬ ನಿರೀಕ್ಷೆ ಇರಿಸಿಕೊಳ್ಳಲಾಗಿದೆ.

ಈ ಆ್ಯಪ್‌ ಮೂಲಕವೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ನೇರ ಪ್ರಸಾರ ಮಾಡಲೂ ಸಿದ್ಧತೆ ನಡೆಸಲಾಗಿದೆ. ಇದಕ್ಕಾಗಿ 10 ಸಾವಿರ ಲಿಂಕ್‌ ಸಿದ್ಧಪಡಿಸಲಾಗಿದೆ.

ವಿಶ್ವದಾಖಲೆ
ರಾಜ್ಯದಲ್ಲಿ ಇದುವರೆಗೆ ಈ ಪ್ರಮಾಣದಲ್ಲಿ ವರ್ಚುವಲ್‌ ಪದಗ್ರಹಣ ಕಾರ್ಯಕ್ರಮ ನಡೆದಿಲ್ಲ. ಇದೇ ಮೊದಲ ಬಾರಿಗೆ ಇಂಥ ಕಾರ್ಯಕ್ರಮ ನಡೆಸಲಾಗುತ್ತದೆ. ಅಷ್ಟೇ ಅಲ್ಲ, ಇದನ್ನು ವೀಕ್ಷಿಸಲು ದೇಶದ ಬೇರೆ ಬೇರೆ ರಾಜ್ಯಗಳ ಪ್ರದೇಶ ಕಾಂಗ್ರೆಸ್‌ ಕಮಿಟಿಗಳಿಂದಲೂ ಝೂಮ್‌ ಲಿಂಕ್‌ಗಾಗಿ ಮನವಿ ಬಂದಿದೆ. ವಿದೇಶದಲ್ಲಿರುವ ಡಿಕೆಶಿ ಅಭಿಮಾನಿಗಳು ಕೂಡ ಲಿಂಕ್‌ ಕಳುಹಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ರಾಜ್ಯದ 7,800 ಪ್ರದೇಶಗಳಲ್ಲಿ ಏಕಕಾಲಕ್ಕೆ ಪ್ರತಿಜ್ಞೆ ಸ್ವೀಕರಿಸಲಾಗುತ್ತದೆ. ಮುಖ್ಯ ಕಾರ್ಯಕ್ರಮದ ವೇದಿಕೆಯ ಸ್ಕ್ರೀನ್‌ ಮೇಲೆ ಇದು ನೇರ ಪ್ರಸಾರವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಪಕ್ಷದ ಅಧ್ಯಕ್ಷರ ಜತೆಗೆ ಕಾರ್ಯಕರ್ತರು ಪ್ರತಿಜ್ಞೆ ಸ್ವೀಕರಿಸುವ ವಿಶಿಷ್ಟ ಕಾರ್ಯಕ್ರಮ ಪ್ರಾಯಃ ಇದೇ ಮೊದಲು.

ಡಿ.ಕೆ. ಸುರೇಶ್‌ ಉಸ್ತುವಾರಿ
ಡಿ.ಕೆ. ಶಿವಕುಮಾರ್‌ ಮೇಲುಸ್ತುವಾರಿಯಲ್ಲಿ ಸಂಸದ ಡಿ.ಕೆ. ಸುರೇಶ್‌ ಈ ವರ್ಚುವಲ್‌ ಸಮಾವೇಶದ ಸಂಪೂರ್ಣ ಜವಾಬ್ದಾರಿ ಹೊತ್ತಿದ್ದಾರೆ. ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ತಂಡ ಮತ್ತು ನುರಿತ ಐಟಿ ತಂತ್ರಜ್ಞರನ್ನು ಬಳಸಿಕೊಂಡು ಎರಡು ತಿಂಗಳಿನಿಂದ ಸಿದ್ಧತೆಗೆ ಶ್ರಮಿಸುತ್ತಿದ್ದಾರೆ.

ಸಂವಿಧಾನ ಪೀಠಿಕೆ ಓದು
ರಾಜ್ಯದ 6,024 ಗ್ರಾ.ಪಂ. ಸಹಿತ ಪುರಸಭೆ, ಪ.ಪಂ., ನಗರಪಾಲಿಕೆಗಳ ವಾರ್ಡ್‌ ಮಟ್ಟದಲ್ಲಿ ಸುಮಾರು 7,800 ಕಡೆಗಳಲ್ಲಿ ಏಕಕಾಲಕ್ಕೆ ಪ್ರಮಾಣ ವಚನದ ಜತೆಗೆ ಪ್ರತಿಜ್ಞಾ ವಿಧಿ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಪ್ರತೀ ಪಂಚಾಯತ್‌ ಮತ್ತು ವಾರ್ಡ್‌ ವ್ಯಾಪ್ತಿಯಲ್ಲಿ ಕನಿಷ್ಠ 50ರಿಂದ 200 ಜನರು ಪಾಲ್ಗೊಳ್ಳುವ ಯೋಜನೆ ರೂಪಿಸಲಾಗಿದೆ.

ಜಿಪಿಎಸ್‌ ಟ್ರ್ಯಾಕರ್‌ ಬಳಕೆ
ಕಾರ್ಯಕ್ರಮದ ಯೋಜನೆ ರೂಪಿಸಲು ಪ್ರತೀ ಬ್ಲಾಕ್‌ ಮಟ್ಟಕ್ಕೂ ಉಸ್ತುವಾರಿ ನೇಮಿಸಲಾಗಿದೆ. ಇವರು ತಮ್ಮ ಬ್ಲಾಕ್‌ನಲ್ಲಿ ನಡೆಸಿದ ಸಿದ್ಧತೆಯನ್ನು ಕೆಪಿಸಿಸಿ ಕೇಂದ್ರ ಕಚೇರಿಯಿಂದಲೇ ಜಿಪಿಎಸ್‌ ಟ್ರ್ಯಾಕ್‌ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.

16 ಸಾವಿರ ಯುವಕರಿಗೆ ತರಬೇತಿ
ಪ್ರತೀ ಪಂಚಾಯತ್‌ ವ್ಯಾಪ್ತಿಯಲ್ಲಿ ನೇರವಾಗಿ ಪ್ರತಿಜ್ಞೆಯಲ್ಲಿ ಪಾಲ್ಗೊಳ್ಳಲು ಝೂಮ್‌ ಆ್ಯಪ್‌ ಬಳಕೆ ಬಗ್ಗೆ ಸುಮಾರು 16 ಸಾವಿರ ಯುವಕರಿಗೆ ತರಬೇತಿ ನೀಡಲಾಗಿದೆ. ಇವರನ್ನು ‘ಡಿಜಿಟಲ್‌ ಯೂತ್‌’ ಆಗಿ ನೇಮಿಸಲಾಗಿದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.