ಇಂದು ನಾಗನಕೆರೆಯಲ್ಲಿ  ವೈಭವದ ಗಿಡದ ಜಾತ್ರೆ


Team Udayavani, Dec 8, 2017, 10:55 AM IST

08-2.jpg

ನಾಗಮಂಗಲ: ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ತಾಲೂಕಿನ ನಾಗನಕೆರೆಯಲ್ಲಿ ಶುಕ್ರವಾರ ಗಿಡದ ಜಾತ್ರೆ
ನಡೆಯಲಿದೆ. ತಾಲೂಕಿನಲ್ಲಿ ವೆಂಕಟೇಶ್ವರ ದೇವರ ಆರಾಧಕರನ್ನು ಗ್ರಾಮ್ಯ ಭಾಷೆಯಲ್ಲಿ ದಾಸಯ್ಯ ಎನ್ನುತ್ತಾರೆ. ಇವರು ತಿರುಪತಿಗೆ ತೆರಳುವ ವೇಳೆ ಗಿಡದ ಜಾತ್ರೆಯಲ್ಲಿ ಪೂಜೆ ಸಲ್ಲಿಸಿ, ಅಕ್ಕಪಕ್ಕದ ಗ್ರಾಮಗಳ ವೆಂಕಟೇಶ್ವರನ ಇತರೆ ಏಳು ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ತೆರಳುವುದು ಸಂಪ್ರದಾಯ. ಶತಮಾನಗಳಿಂದಲೂ ಈ ಪರಂಪರೆ ನಡೆದು ಬಂದಿದೆ. ಪ್ರತೀ ವರ್ಷ ಡಿಸೆಂಬರ್‌ ತಿಂಗಳ ಮೊದಲ ಶುಕ್ರವಾರದಂದು ಜಾತ್ರೆ ನಡೆಯುತ್ತದೆ. ತಿರುಪತಿಗೆ  ಹೋಗಲು ಶಕ್ತರಲ್ಲದವರು ಇದನ್ನೇ ತಿರುಪತಿ ಎಂದು ಭಾವಿಸಿ ಈ ಜಾತ್ರೆಯಲ್ಲಿ ತಮ್ಮ ಹರಕೆಗಳನ್ನು ಅರ್ಪಿಸುವುದು ಪ್ರತೀತಿ.

ಬಾಡೂಟ: ಗಿಡದ ಜಾತ್ರೆಗೆ ಆಗಮಿಸುವ ಎಲ್ಲಾ ಹರಿಭಕ್ತರು (ದಾಸಪ್ಪ) ಜೋಳಿಗೆಯಲ್ಲಿ ತಂದ ದೇವರನ್ನು ಗಿಡದ ಪ್ರದೇಶದಲ್ಲಿ ಇಟ್ಟು ಪೂಜಿಸುತ್ತಾರೆ. ಇಲ್ಲಿ ದೇವರಿಗೆ ಮಾಂಸದ ಜತೆಗೆ ಮದ್ಯದ ನೈವೇದ್ಯವೂ ನಡೆಯುತ್ತದೆ. ಬಳಿಕ ಅದನ್ನು ಪ್ರಸಾದ ರೂಪದಲ್ಲಿ ಭಕ್ತರಿಗೆ ಹಂಚಿ ತಾವೂ ಸೇವಿಸುತ್ತಾರೆ. ಜಾತ್ರೆ ವೇಳೆ ಮದ್ಯ ಮಾರಾಟ ಮಾಡುವುದು, ಮಾಂಸದ ಭೂರೀ ಭೋಜನ ಇಲ್ಲಿನ  ವಿಶೇಷ.

20 ಸಾವಿರ ಭಕ್ತರು: ತಾಲೂಕಿನ ಧಾರ್ಮಿಕ ಮತ್ತು ಪುಣ್ಯಕ್ಷೇತ್ರ ಆದಿಚುಂಚನಗಿರಿ ಜಾತ್ರೆ ಬಳಿಕ ಅತಿ ಹೆಚ್ಚು ಜನ ಸೇರುವ ಜಾತ್ರೆ ಗಿಡದ ಜಾತ್ರೆಯಾಗಿದೆ. ನಾಡಿನಾದ್ಯಂತ ಸುಮಾರು 20 ಸಾವಿರಕ್ಕೂ ಹೆಚ್ಚು ತಿಮ್ಮಪ್ಪನ ಭಕ್ತರು ಜಾತ್ರೆಗೆ ಸೇರಲಿದ್ದಾರೆ. ಇಲ್ಲಿಗೆ ಬಂದು ವೆಂಕಟೇಶ್ವರನ ದರ್ಶನ ಪಡೆದರೆ ತಿರುಪತಿ ತಿಮ್ಮಪ್ಪನನ್ನು ನೋಡಿದಷ್ಟೇ ಫ‌ಲ ಸಿಗುತ್ತದೆ ಎಂಬುದು ಇಲ್ಲಿನ ಭಕ್ತರ ನಂಬಿಕೆ.

ಕೊಠಡಿಗಳ ಕೊರತೆ: ಜಾತ್ರೆ ನಡೆಯುವ ಪಕ್ಕದಲ್ಲಿ ನಾಗನಕೆರೆ  ಇದೆ. ಹೇಮಾವತಿ ಜಲಾಶಯದಿಂದ ನೀರು ಹರಿಸಿದ ಕಾರಣ ಈ ಬಾರಿ ಕೆರೆ ಭರ್ತಿಯಾಗಿದೆ. ಜಾತ್ರೆಯಲ್ಲಿ ವೆಂಕಟೇಶ್ವರ (ಮೂಡಲ ಗಿರಿಯಪ್ಪ)ನ ಭಕ್ತರು ಕೇಶಮುಂಡನ ಮಾಡಿಸಿ ಕೊಂಡು ಕೆರೆಯಲ್ಲಿ ಸ್ನಾನ ಮಾಡುವುದು ಪದ್ಧತಿ. ಆದರೆ ಇಲ್ಲಿ ಸ್ನಾನ ಮಾಡಿದ ಭಕ್ತರಿಗೆ ಬಟ್ಟೆ ಬದಲಿಸಲು ಕೊಠಡಿ, ಮೊಬೈಲ್‌ ಕೊಠಡಿ ವ್ಯವಸ್ಥೆಗಳಿಲ್ಲ. 

ಮೂಲ ಸೌಲಭ್ಯಗಳ ಕೊರತೆ: ಗುಂಡಿ ಬಿದ್ದ ರಸ್ತೆ ಜಾತ್ರೆಗೆ ಸಾವಿರಾರು ಮಂದಿ ಆಗಮಿಸಲಿದ್ದಾರೆ. ಆದರೆ, ಮುಖ್ಯರಸ್ತೆಯಿಂದ ಜಾತ್ರೆಗೆ ತೆರಳುವ ರಸ್ತೆ ಗುಂಡಿ ಬಿದ್ದಿದೆ. ವಾಹನ ಸವಾರರು ಆಯತಪ್ಪಿ$ಬೀಳುವ ಸಂಭವವಿದೆ. ರಸ್ತೆಯು ಒಮ್ಮೆಯೂ ಡಾಂಬರನ್ನೇ ಕಂಡಿಲ್ಲ. ಜಲ್ಲಿ ಕಾಮಗಾರಿ ಅರ್ಧಕ್ಕೆ ನಿಂತಿದೆ. ಭಕ್ತರು, ಜಾತ್ರಾ ಪ್ರವಾಸಿಗರ ತೊಂದರೆ ಹೇಳತೀರದು.

ಶತಮಾನಗಳ ಇತಿಹಾಸವಿ ರುವ ಗಿಡದ ಜಾತ್ರೆ ಪ್ರದೇಶದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಜಾತ್ರೆಗೆ ತೆರಳುವ ರಸ್ತೆ ಡಾಂಬರೀಕರಣ ಟೆಂಡರ್‌ ಹಂತದ ಲ್ಲಿದೆ. ಶೀಘ್ರ ಕಾಮಗಾರಿಯನ್ನು ಆರಂಭಿಸಲಾಗುವುದು. 
 ●ಚೆಲುವರಾಯಸ್ವಾಮಿ, ಶಾಸಕ

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.