ಇಂದು ಜಕಣಾಚಾರಿ ಸಂಸ್ಮರಣಾ ದಿನಾಚರಣೆ
Team Udayavani, Jan 1, 2018, 10:19 AM IST
ತುಮಕೂರು: ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ವಿಶ್ವಕರ್ಮ ಸಮಾಜವನ್ನು ಸಂಘಟಿಸುವ ಉದ್ದೇಶ
ದಿಂದ ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಕಳೆದ ನಾಲ್ಕು ವರ್ಷದಿಂದ ಜ.1ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ನಡೆಸಿಕೊಂಡು ಬರುತ್ತಿದೆ. ಇದರಂಗವಾಗಿ ನಗರ ಸಮೀಪದ ಕೈದಳದಲ್ಲಿ 5ನೇ ರಾಜ್ಯಮಟ್ಟದ ಅಮರಶಿಲ್ಪಿ ಜಕಣಾಚಾರಿಯವರ ಸಂಸ್ಮರಣಾ ದಿನಾಚರಣೆಯನ್ನು ಸೋಮವಾರ ಹಮ್ಮಿಕೊಳ್ಳಲಾಗಿದೆ ಎಂದು ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿ, ಪ್ರತಿವರ್ಷದಂತೆ ಈ ಬಾರಿಯೂ ಜಕಣಾಚಾರಿಯ ಸ್ಮರಣೋತ್ಸವನ್ನು ಸೋಮವಾರ ಮಧ್ಯಾಹ್ನ 12 ಗಂಟೆಗೆ ತುಮಕೂರು ಜಿಲ್ಲೆಯ ಕೈದಾಳದಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಮಾಜಿ ಮುಖ್ಯಮಂತ್ರಿ ಬಿ.
ಎಸ್.ಯಡಿಯೂರಪ್ಪ ವಹಿಸಲಿದ್ದಾರೆ. ವಿಶ್ವಕರ್ಮ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಕಾಳಹಸ್ತೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ, ಬೋವಿ ಸಮಾಜದ ಪೀಠಾಧ್ಯಕ್ಷರಾದ ಸಿದ್ಧರಾಮೇಶ್ವರ ಸ್ವಾಮೀಜಿ, ಜಿಲ್ಲೆಯ ಶಾಸಕರು, ಮುಖಂಡರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಿಂದುಳಿದ ವರ್ಗಗಳ ಸುಮಾರು 25 ಜನ ಪೀಠಾಧಿಪತಿಗಳು ದಿವ್ಯ
ಸಾನ್ನಿಧ್ಯವನ್ನು ವಹಿಸಲಿದ್ದಾರೆ. ಜೊತೆಗೆ, ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಸಮಾಜ ಬಾಂಧವರು
ಭಾಗವಹಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ