ಇಂದು ವಿಶ್ವ ಜನಸಂಖ್ಯೆ ದಿನಾಚರಣೆ: 4 ದಶಕದಲ್ಲಿ ಜನನ ಪ್ರಮಾಣ 2 ಪಟ್ಟು ಇಳಿಕೆ


Team Udayavani, Jul 11, 2022, 6:55 AM IST

ಇಂದು ವಿಶ್ವ ಜನಸಂಖ್ಯೆ ದಿನಾಚರಣೆ: 4 ದಶಕದಲ್ಲಿ ಜನನ ಪ್ರಮಾಣ 2 ಪಟ್ಟು ಇಳಿಕೆ

ಬೆಂಗಳೂರು: ಹಲವು ದಶಕಗಳ ಹಿಂದೆ ಜನಸಂಖ್ಯೆ ನಿಯಂತ್ರಣಕ್ಕಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೊಳಿ ಸಿತ್ತು. ಆದರೆ, ಈಗ ಪರಿಸ್ಥಿತಿ ತದ್ವಿರುದ್ಧವಾಗಿದೆ. ರಾಜ್ಯದಲ್ಲಿ ಜನನ ಪ್ರಮಾಣ ವರ್ಷ ದಿಂದ ವರ್ಷಕ್ಕೆ ಕುಸಿತ ಕಾಣುವ ಮೂಲಕ ಆಂತಕ ಸೃಷ್ಟಿಯಾಗಿದೆ.

ಹಲವು ವರ್ಷಗಳಿಂದ ಪ್ರತಿ ವರ್ಷ ಸರಾಸರಿ 10 ಲಕ್ಷ ಮಕ್ಕಳ ಜನನವಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಸುಮಾರು 10,000 ಮಕ್ಕಳ ಜನನ ಸಂಖ್ಯೆ ಕುಸಿತವಾಗುತ್ತಿದೆ. ಇತ್ತೀಚಿನ ದಿನದಲ್ಲಿ ಫ‌ಲವತ್ತತೆ (ಫ‌ರ್ಟಿಲಿಟಿ) ದರ ಕುಸಿತಗೊಳ್ಳುತ್ತಿರುವುದು ಕಾರಣ ಎನ್ನಲಾಗುತ್ತಿದೆ. 20-32 ವರ್ಷದೊಳಗಿನ ಪುರುಷರು ಹಾಗೂ ಮಹಿಳೆಯರು ಸಂತಾ ನೋತ್ಪತ್ತಿಯ ಅವಧಿಯಲ್ಲಿ ಹೊಂದುವ ಶಿಶುಗಳ ಸಂಖ್ಯೆಯೂ ಕಡಿಮೆಯಾಗಿದೆ.

ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ ಅನ್ವಯ 1981ರಲ್ಲಿ ಫ‌ಲವತ್ತತೆಯ ದರ ಶೇ. 3.6 ಇದ್ದು, 2020ರಲ್ಲಿ ಶೇ. 1.7ಕ್ಕೆ ಇಳಿಕೆಯಾಗಿದೆ. ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ 5ರ ವರದಿ ಅನ್ವಯ ಫ‌ಲ ವತ್ತತೆ ದರವು ರಾಷ್ಟ್ರೀಯ ಸರಾಸರಿಗಿಂತ ಉತ್ತಮ ವಾಗಿದೆ ಎನ್ನಲಾಗುತ್ತಿದೆ. ಆದರೂ ಕೇಂದ್ರದ ನಾಲ್ಕನೇ ಸಮೀಕ್ಷೆ ವರದಿಗೆ ಹೋಲಿಸಿದರೆ ಈ ಬಾರಿ 0.1ರಷ್ಟು ಇಳಿಕೆಯಾಗಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ 2030ರ ಹೊತ್ತಿಗೆ ಜನನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗುವ ಸಾಧ್ಯತೆಗಳು ವ್ಯಕ್ತವಾಗಿದೆ.

ನಗರದಲ್ಲಿ ಶಿಶು ಮರಣ!
ಜನನ ಸಂಖ್ಯೆ ಇಳಿಕೆ ನಡುವೆ ರಾಜ್ಯದಲ್ಲಿ ಗ್ರಾಮೀಣ ಭಾಗಗಳಿಗೆ ಹೋಲಿಸಿದರೆ, ಆಧುನಿಕ ತಂತ್ರಜ್ಞಾನ ವ್ಯವಸ್ಥೆಯನ್ನು ಅಳವಡಿಸಿಕೊಂಡಿರುವ ನಗರ ಭಾಗದಲ್ಲಿ ಶಿಶುಗಳ ಮರಣ ಪ್ರಮಾಣ ಹೆಚ್ಚಾಗುತ್ತಿದೆ. ಸಮೀಕ್ಷೆ ಅನ್ವಯ ರಾಜ್ಯದಲ್ಲಿ ಗ್ರಾಮೀಣ ಭಾಗದಲ್ಲಿ ಜನನವಾದ 1000 ನವಜಾತ ಶಿಶುಗಳಲ್ಲಿ ಗರಿಷ್ಠ 26 ಶಿಶುಗಳು ಹಾಗೂ ನಗರ ಭಾಗದಲ್ಲಿ 27 ಶಿಶುಗಳ ಸಾವನ್ನಪ್ಪುತ್ತಿವೆ.

ಗಂಡು ಮಗು ಹಂಬಲ
ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆಯಲ್ಲಿ ರಾಜ್ಯದಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಬಹುತೇಕ ದಂಪತಿಗಳು ಗಂಡು ಮಗು ಬೇಕು ಎನ್ನುವ ಅಭಿಲಾಷೆಯನ್ನು ಹೊಂದಿದ್ದಾರೆ. ಶೇ. 79.3 ಪುರುಷರು ಹಾಗೂ ಶೇ. 73.6ರಷ್ಟು ಮಹಿಳೆಯರು ಗಂಡು ಮಗು ಪಡೆಯಬೇಕು ಎನ್ನುವ ಹಂಬಲವನ್ನು ಹೊಂದಿರುವುದು ವರದಿಯಾಗಿದೆ.

ಜನನ ಪ್ರಮಾಣ ಇಳಿಕೆಗೆ ಕಾರಣ
ರಾಜ್ಯದಲ್ಲಿ ಜನನ ಪ್ರಮಾಣ ಇಳಿಕೆಗೆ ಆರೋಗ್ಯ ಇಲಾಖೆ ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮಗಳು ಸಹ ಕಾರಣವಾಗಿದೆ. ಇದರ ಜತೆಗೆ ಪ್ರಸ್ತುತ ಹೆಣ್ಣು ಮಕ್ಕಳು ಮದುವೆ ಅವಧಿಯನ್ನು 25ರಿಂದ 32 ವರ್ಷಕ್ಕೆ ಮುಂದೂಡುತ್ತಿರುವುದರಿಂದ ಮಕ್ಕಳಾಗುವ ಪ್ರಮಾಣ ಕುಸಿಯುತ್ತಿರುವುದು, ಒಂದು ಮಗುವಿನ ಸೂತ್ರ ಅಳವಡಿಕೆ ಹಾಗೂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡುತ್ತಿರುವುದು ಮಕ್ಕಳ ಜನನ ಇಳಿಕೆಗೆ ಕಾರಣ ಎನ್ನಲಾಗುತ್ತಿದೆ.

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.