ಇಂದು ಶ್ರೀರಾಮುಲು ಪುತ್ರಿ ನಿಶ್ಚಿತಾರ್ಥ
Team Udayavani, Dec 18, 2019, 3:00 AM IST
ಬಳ್ಳಾರಿ: ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರ ಮಗಳ ನಿಶ್ಚಿತಾರ್ಥ ಬುಧವಾರ (ಡಿ.18) ಬೆಂಗಳೂರಿನಲ್ಲಿ ನಡೆಯಲಿದ್ದು ಬಿಜೆಪಿಯ ಹಿರಿಯ ಮುಖಂಡರನ್ನೆಲ್ಲ ಆಹ್ವಾನಿಸಲಾಗಿದೆ. ಹೈದ್ರಾಬಾದ್ ಮೂಲದ ಉದ್ಯಮಿಯೊಬ್ಬರ ಮಗ ಲಂಡನ್ನಲ್ಲಿ ಎಂಬಿಎ ವ್ಯಾಸಂಗ ಮಾಡಿರುವ ಲಲಿತ್ ಎಂಬವರೊಂದಿಗೆ ಶ್ರೀರಾಮುಲು ಪುತ್ರಿ ರಕ್ಷಿತಾರ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ಹೊಟೇಲ್ನಲ್ಲಿ ನಡೆಯಲಿದೆ.
ಇದರ ಸಿದ್ಧತೆಯಲ್ಲಿ ತೊಡಗಿದ್ದ ಶ್ರೀರಾಮುಲು, ಕಳೆದ ಹಲವು ದಿನಗಳಿಂದ ಸರ್ಕಾರದ ಯಾವುದೇ ಕಾರ್ಯಕ್ರಮಗಳಿಗೆ ಹಾಜರಾಗಿಲ್ಲ. ಈ ನಡುವೆ ಸೋಮವಾರ ಬಿಜೆಪಿಯ ಹಿರಿಯ ಮುಖಂಡರಾದ ಸಂತೋಷ್ ಅವರಿಗೆ ಆಹ್ವಾನ ನೀಡಲು ಭೇಟಿಯಾಗಿದ್ದು, ರಾಜಕೀಯ ವಿಷಯದ ಬಗ್ಗೆಯೂ ಚರ್ಚಿಸಿದ್ದಾರೆ ಎನ್ನಲಾಗಿದೆ. ನಿಶ್ಚಿತಾರ್ಥ ಸಮಾರಂಭಕ್ಕೆ ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಆಗಮಿಸುವ ಸಾಧ್ಯತೆಯಿದೆ. ಇವರೊಂದಿಗೆ ವಾಲ್ಮೀಕಿ ಸಮುದಾಯದ ಪ್ರಮುಖ ನಾಯಕರೂ ಪಾಲ್ಗೊಳ್ಳಲಿದ್ದಾರೆ.