ಇಂದಿನಿಂದ ಮಾ. 29ರವರೆಗೆ ರೈಲು ಸಂಚಾರ ವ್ಯತ್ಯಯ
Team Udayavani, Mar 23, 2022, 7:35 AM IST
ಬೆಂಗಳೂರು: ಸಾಮರ್ಥ್ಯ ಮತ್ತು ಸುರಕ್ಷಿತೆಯನ್ನು ಸುಧಾರಿಸಲು ಹಾಗೂ ರೈಲ್ವೇ ಮೂಲಸೌಕರ್ಯ ವೃದ್ಧಿ ಹಿನ್ನೆಲೆ ಕೆಲವು ಮಾರ್ಗಗಳಲ್ಲಿ ದ್ವಿಪಥ ಹಾಗೂ ವಿದ್ಯುದೀಕರಣಗೊಳಿಸುವ ಕಾಮಗಾರಿ ಕೈಗೆತ್ತಿಕೊಂಡಿದ್ದು ಮುಂದಿನ ಎಂಟು ದಿನಗಳ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ನೈರುತ್ಯ ರೈಲ್ವೆಯ ಪ್ರಯಾಣಿಕರ ಸೌಕರ್ಯ ವಿಭಾಗದ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಡಾ|ಅನೂಪ್ ದಯಾನಂದ್ ಸಾಧು ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ. 23ರಿಂದ 29ರವರೆಗೆ ಯಲಹಂಕದ ಹಿಂದೂಪುರ-ಪೆನುಕೊಂಡ, ಹೊಸದುರ್ಗ-ಚಿಕ್ಕಜಾಜೂರು, ಅಳ್ನಾವರ-ಅಂಬೆವಾಡಿ, ಯಲವಿಗಿ -ಸವಣೂರು, ಸವಣೂರು-ಹಾವೇರಿ, ಗದಗ- ಹೊಳೆಆಲೂರು, ಸೌಂಶಿ-ಯಲವಿಗಿ, ಕುಡಚಿ-ಘಟಪ್ರಭಾ, ಲೋಂಡಾ-ತಿನೈಘಾಟ್ ಮಾರ್ಗದ ರೈಲು ಹಳಿಗಳಲ್ಲಿ ಕೆಲವು ಕಡೆ ದ್ವಿಪಥ ಮಾರ್ಗ ಹಾಗೂ ಇನ್ನೂ ಕೆಲವು ಕಡೆ ವಿದ್ಯುದೀಕರಣಗೊಳಿಸುವ ಕಾಮಗಾರಿ ನಡೆಯುತ್ತಿರುವುದರಿಂದ ಹತ್ತು ರೈಲುಗಳನ್ನು ರದ್ದುಗೊಳಿಸಲಾಗಿದ್ದು, 14 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಈಗಾಗಲೇ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಹಣ ವಾಪಾಸು ನೀಡಲಾಗುತ್ತದೆ. ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ