ಇಂದು ಕಂಕಣ ಸೂರ್ಯಗ್ರಹಣ: ಹಲವೆಡೆ ದೇವರ ದರ್ಶನವಿಲ್ಲ
Team Udayavani, Dec 26, 2019, 3:05 AM IST
ಬೆಂಗಳೂರು: ಗುರುವಾರ ಸಂಭವಿ ಸಲಿರುವ ಕಂಕಣ ಸೂರ್ಯಗ್ರಹಣ ನಿಮಿತ್ತ ರಾಜ್ಯದ ಕೆಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಗ್ರಹಣಶಾಂತಿ ಹೋಮ ಸಹಿತ ವಿವಿಧ ಧಾರ್ಮಿಕ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಕೆಲವೆಡೆ, ಗ್ರಹಣದ ವೇಳೆ ದೇವಾಲಯಗಳ ಬಾಗಿಲು ಬಂದ್ ಮಾಡ ಲಾಗುತ್ತಿದ್ದು, ಭಕ್ತರಿಗೆ ದೇವರ ದರ್ಶನ ಇರುವುದಿಲ್ಲ.
ಬಿಳಿಗಿರಿರಂಗನಾಥಸ್ವಾಮಿ ದೇಗುಲ: ಖಗ್ರಾಸ ಸೂರ್ಯಗ್ರಹಣದ ನಿಮಿತ್ತ ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಪ್ರಸಿದ್ಧ ಪೌರಾಣಿಕ ಬಿಳಿಗಿರಿರಂಗನಾಥಸ್ವಾಮಿ ದೇಗುಲ ಸೇರಿದಂತೆ ಪ್ರಮುಖ ದೇಗುಲಗಳಲ್ಲಿ ದೇವರ ದರ್ಶನ ಇರುವುದಿಲ್ಲ. ಬೆಳಗಿನ ಜಾವ ಧನುರ್ಮಾಸದ ಪೂಜೆ ಎಂದಿನಂತೆ ಇರಲಿದೆ. ಮುಂಜಾನೆ 5 ಗಂಟೆಯಿಂದಲೇ ಪೂಜೆಗಳು ಎಂದಿನಂತೆ ಇರಲಿದ್ದು 5.30 ನಂತರ ದೇಗುಲದ ಬಾಗಿಲು ಹಾಕಲಾಗುವುದು. ನಂತರ, ಮಧ್ಯಾಹ್ನ ಒಂದು ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಿದೆ ಎಂದು ದೇಗುಲದ ಮೂಲಗಳು ತಿಳಿಸಿವೆ.
ಉಡುಪಿ ಕೃಷ್ಣಮಠದಲ್ಲಿ ಪೂಜಾವೇಳೆ ಬದಲು
ಉಡುಪಿ: ಕಂಕಣ ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಡಿ.26ರಂದು ಉಡುಪಿ ಶ್ರೀಕೃಷ್ಣಮಠದಲ್ಲಿ ಪೂಜಾವೇಳೆಯಲ್ಲಿ ಬದಲಾವಣೆ ಮಾಡಲಾಗಿದೆ. ಅಂದು ಬೆಳಗ್ಗೆ ಧನುರ್ಮಾಸ ಪೂಜೆ ಎಂದಿನಂತೆ ನಡೆಯಲಿದೆ. ಗ್ರಹಣ ಮೋಕ್ಷದ ಬಳಿಕ 11 ಗಂಟೆಯ ಬಳಿಕ ಪಂಚಾಮೃತ ಅಭಿಷೇಕ, ಮಹಾಪೂಜೆ ನಡೆಯಲಿದೆ. ಆ ಬಳಿಕವಷ್ಟೇ ಭಕ್ತಾದಿಗಳಿಗೆ ಪ್ರಸಾದ ಭೋಜನ ನೀಡಲಾಗುವುದು ಎಂದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ತಿಳಿಸಿದ್ದಾರೆ.
ಶೃಂಗೇರಿಯಲ್ಲಿ ಭಕ್ತಾದಿಗಳ ಸೇವೆಗೆ ಅವಕಾಶವಿಲ್ಲ
ಶೃಂಗೇರಿ: ದಕ್ಷಿಣಾಮ್ನಾಯ ಶಾರದಾ ಪೀಠದ ಶ್ರೀ ಶಾರದಾಂಬಾ ಸನ್ನಿಧಿಯಲ್ಲಿ ಗುರುವಾರ ಪೂಜಾ ಕಾರ್ಯಗಳು ಎಂದಿನಂತೆ ನಡೆಯಲಿವೆ. ಸುಪ್ರಭಾತ ಪೂಜೆ ಸಹಿತ ದಿನನಿತ್ಯದ ಪೂಜೆಗಳು ನಡೆಯಲಿದ್ದು, ಗ್ರಹಣ ಕಾಲದಲ್ಲಿ ಭಕ್ತಾದಿಗಳ ಸೇವೆಗೆ ಅವಕಾಶವಿಲ್ಲ. ಗ್ರಹಣ ಮೋಕ್ಷದ ನಂತರ ದೇವಾಲಯ ಶುದ್ದೀಕರಿಸಿ, ಮತ್ತೆ ಪೂಜಾ ಕಾರ್ಯಗಳನ್ನು ನಡೆಸಲಾಗುತ್ತದೆ. ಗ್ರಹಣದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಡಿ.26ರ ಮಧ್ಯಾಹ್ನದ ಪ್ರಸಾದ ಸೇವೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ