ನಟಿ ಅನುಷ್ಕಾ ಶೆಟ್ಟಿ ಸಹೋದರನಿಗೆ ಮುತ್ತಪ್ಪ ರೈ ಆಪ್ತನಿಂದ ಕೊಲೆ ಬೆದರಿಕೆ
Team Udayavani, Jun 12, 2022, 11:56 PM IST
ಬೆಂಗಳೂರು: ನಟಿ ಅನುಷ್ಕಾ ಶೆಟ್ಟಿ ಸಹೋದರ ಹಾಗೂ ಜಯ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಗುಣರಂಜನ್ ಶೆಟ್ಟಿ ಹತ್ಯೆಗೆ ಮಾಜಿ ಭೂಗತ ಪಾತಕಿ, ದಿ| ಮುತ್ತಪ್ಪ ರೈ ಆಪ್ತ ಸಹಾಯಕ ಮನ್ವಿತ್ ರೈ ಸಂಚು ರೂಪಿಸಿದ್ದಾರೆ ಎನ್ನುವ ವದಂತಿ ಹಬ್ಬಿದೆ.
ಈ ಮಧ್ಯೆ ಅದಕ್ಕೆ ಪೂರಕವಾಗಿ ಗುಣರಂಜನ್ ಶೆಟ್ಟಿ ಪತ್ರಿಕಾ ಪ್ರಕಟನೆ ನೀಡಿದ್ದು, ಹತ್ಯೆಗೆ ಸಂಚು ರೂಪಿಸಿರುವ ವಿಷಯ ಸತ್ಯ ಎಂದು ಸ್ಪಷ್ಟಪಡಿಸಿದ್ದಾರೆ. ಮತ್ತೂಂದೆಡೆ ಹತ್ಯೆ ಸಂಚಿಗೂ ತನಗೂ ಯಾವುದೇ ಸಂಬಂಧವಿಲ್ಲ. ನಾನು ವ್ಯವಹಾರ ಸಂಬಂಧ ವಿದೇಶದಲ್ಲಿದ್ದೇನೆ. ಪೊಲೀಸರು ತನಿಖೆ ನಡೆಸಲಿ ಎಂದು ಮನ್ವಿತ್ ರೈ ಹೇಳಿದ್ದಾರೆ.
ಗುಣರಂಜನ್ ಶೆಟ್ಟಿಗೆ ಜೀವ ಬೆದರಿಕೆ ಇದೆ. ರಕ್ಷಣೆ ನೀಡುವಂತೆ ಜಯಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ರವಿವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಮಾಡಿದ್ದಾರೆ.
ಒಂದು ಕಾಲದಲ್ಲಿ ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಗುಣರಂಜನ್ ಶೆಟ್ಟಿ ಮತ್ತು ಮನ್ವಿತ್ ರೈ ಅವರು ಮುತ್ತಪ್ಪ ರೈ ಮೃತಪಟ್ಟ ಬಳಿಕ ವಿರಸವಾಗಿ ದೂರವಾಗಿದ್ದರು. ಬಳಿಕ ಗುಣರಂಜನ್ ಶೆಟ್ಟಿ ಪ್ರತ್ಯೇಕವಾಗಿ ಜಯಕರ್ನಾಟಕ ಜನಪರ ವೇದಿಕೆ ಎನ್ನುವ ಸಂಘಟನೆ ಸ್ಥಾಪಿಸಿದ್ದರು.
ಜತೆಗೆ ಮಂಗಳೂರು ಮತ್ತು ಬೆಂಗಳೂರಿನಲ್ಲಿ ವ್ಯವಹಾರ ಮಾಡಿಕೊಂಡಿದ್ದು, ಮಾಧ್ಯಮ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದರು. ಹೀಗಾಗಿ ಶೆಟ್ಟಿ ಕೊಲೆಗೆ ಸಂಚು ರೂಪಿಸಲಾಗಿದೆ ಎಂದು ಹೇಳಲಾಗಿದೆ.
ಬಂಟ್ವಾಳದಲ್ಲಿ ಮುತ್ತಪ್ಪ ರೈ ಆಪ್ತರ ವಿಚಾರಣೆ
ಪ್ರಕರಣದ ಬೆನ್ನಲ್ಲೇ ಮುತ್ತಪ್ಪ ರೈ ಆಪ್ತರಾದ ಬಂಟ್ವಾಳದ ಒಬ್ಬರನ್ನು ಮಂಗಳೂರು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಮನ್ವಿತ್ ರೈ ಮತ್ತು ಆ ವ್ಯಕ್ತಿ ಆಪ್ತರಾಗಿದ್ದರಿಂದ ಹೆಚ್ಚಿನ ಮಾಹಿತಿ ಸಿಗುವ ನಿರೀಕ್ಷೆ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಹತ್ಯೆ ಸಂಚಿಗೂ ತನಗೂ ಸಂಬಂಧವಿಲ್ಲ
ಹತ್ಯೆ ಸಂಚಿನ ಕುರಿತು ಸ್ಪಷ್ಟನೆ ನೀಡಿರುವ ಮನ್ವಿತ್ ರೈ, “ಕೆಲಸ ನಿಮಿತ್ತ ವಿದೇಶದಲ್ಲಿದ್ದೇನೆ. ಪೊಲೀಸರ ಪ್ರಾಥಮಿಕ ವಿಚಾರಣೆಯಲ್ಲಿ ನನ್ನ ಹೆಸರು ಕೇಳಿ ಬಂದಿದೆ. ಆದರೆ, ಯಾವ ಕಾರಣಕ್ಕೆ ಬಂದಿದೆ ಎನ್ನುವುದು ಗೊತ್ತಾಗಿಲ್ಲ. ನಾನು ಯಾರಿಗೂ ಬೆದರಿಕೆ ಹಾಕಿಲ್ಲ. ಈ ಬಗ್ಗೆ ಯಾರು ಕೂಡ ಪೊಲೀಸರಿಗೂ ದೂರು ನೀಡಿಲ್ಲ. ನನ್ನ ವಿರುದ್ಧ ಯಾವುದೇ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣಗಳು ದಾಖಲಾಗಿಲ್ಲ. ಆದರೂ ಯಾವ ಕಾರಣಕ್ಕೆ ನನ್ನ ಹೆಸರು ಯಾಕೆ ತಳುಕು ಹಾಕುತ್ತಿದ್ದಾರೆ’ ಎನ್ನುವುದು ಗೊತ್ತಾಗಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ