ಅನಧಿಕೃತ ಕೇಬಲ್ ತೆರವಿಗೆ ಕಠಿಣ ಕ್ರಮ
Team Udayavani, Jul 11, 2018, 12:01 PM IST
ವಿಧಾನಪರಿಷತ್ತು: ಬೆಂಗಳೂರಿನ ರಸ್ತೆಗಳಲ್ಲಿ ಅಳವಡಿಸಲಾಗಿರುವ ಅನಧಿಕೃತ ಮತ್ತು ಅಕ್ರಮ ಕೇಬಲ್ಗಳನ್ನು ತೆರವುಗೊಳಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಪಿ.ಆರ್.ರಮೇಶ್ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿಗಳು, ಬೆಂಗಳೂರಿನ ಹಲವು ಕಡೆ ಹತ್ತಾರು ಕಿ.ಮೀ ಉದ್ದ ಅನಧಿಕೃತ ಕೇಬಲ್ಗಳನ್ನು ಹಾಕಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇವುಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿಗೆ ಸೂಚನೆ ನೀಡಲಾಗಿದೆ ಎಂದರು.
ಟೆಲಿಕಾಂ, ಇಂಟರ್ನೆಟ್ ಸರ್ವೀಸ್ ಹಾಗೂ ಇತರೆ ಸೇವಾ ಸಂಸ್ಥೆಗಳು ಕೆಬಲ್ಗಳನ್ನು ಅಳವಡಿಸುತ್ತವೆ. ಈಗಾಗಲೇ 8,860 ಕಿ.ಮೀ ವಿಸ್ತೀರ್ಣದಷ್ಟು ಕೇಬಲ್ ಅಳವಡಿಕೆಗೆ ಬಿಬಿಎಂಪಿ ಅನುಮತಿ ಕೊಟ್ಟಿದ್ದು, ಸಂಸ್ಥೆಗಳಿಂದ 620 ಕೋಟಿ ರೂ. ಶುಲ್ಕ ವಸೂಲು ಮಾಡಿದೆ. ಈ ಮಧ್ಯೆ ಸಾರ್ವಜನಿಕರಿಗೆ, ಪಾದಚಾರಿಗಳಿಗೆ ತೊಂದರೆ ಆಗುತ್ತಿರುವುದರಿಂದ ಅನಧಿಕೃತ ಕೇಬಲ್ಗಳ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ದಂಡ ಹೆಚ್ಚಳ: ಅನಧಿಕೃತವಾಗಿ ಕೆಬಲ್ ಅಳವಡಿಸಿದ ಸಂಸ್ಥೆಗಳಿಗೆ ವಿಧಿಸುವ ದಂಡವನ್ನು 25 ಲಕ್ಷ ರೂ. ಹಾಗೂ ರಸ್ತೆ ಅಗೆಯುವ ಖಾಸಗಿ ವ್ಯಕ್ತಿಗಳಿಗೆ ದಂಡದ ಮೊತ್ತವನ್ನು 10 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ನಗರದಲ್ಲಿ 11 ಟೆಲಿಕಾಂ, 2 ನಾನ್ ಟೆಲಿಕಾಂ ಹಾಗೂ 7 ಇಂಟರ್ನೆಟ್ ಸೇವೆ ಒದಗಿಸುವ ನೋಂದಾಯಿತ ಗುತ್ತಿಗೆದಾರರು ಇದ್ದಾರೆ.
ಇವರು ತಪ್ಪು ಮಾಡಿದರೆ ಸುಲಭವಾಗಿ ಕ್ರಮ ಜರುಗಿಸಬಹುದು. ಆದರೆ, ಅನಧಿಕೃತವಾಗಿ ಅಳವಡಿಸಿದ ಕೇಬಲ್ಗಳ ವಾರಸುದಾರರು ಯಾರು ಎಂಬುದೇ ಗೊತ್ತಾಗುವುದಿಲ್ಲ. ಏನೇ ಇದ್ದರೂ ಅನಧಿಕೃತ ಕೇಬಲ್ಗಳನ್ನು ತೆರವುಗೊಳಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ