ವಿದ್ಯಾರ್ಥಿಗಳಿಂದ ಜಾರ್ಖಂಡ್ ಪ್ರವಾಸ
Team Udayavani, Dec 14, 2019, 3:00 AM IST
ಬೆಂಗಳೂರು: ಏಕ್ ಭಾರತ್ ಶ್ರೇಷ್ಠಭಾರತ್ ಯೋಜನೆಯ ಸಮಗ್ರ ಅನುಷ್ಠಾನಕ್ಕಾಗಿ ಕರ್ನಾಟಕದ ವಿದ್ಯಾರ್ಥಿಗಳು ಜಾರ್ಖಂಡ್ಗೆ ಪ್ರವಾಸ ಬೆಳೆಸಲಿದ್ದಾರೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ವಿನಿಮಯದ ಏಕ್ ಭಾರತ್ ಶ್ರೇಷ್ಠ ಭಾರತ್ ಯೋಜನೆಯಡಿ ಜಾರ್ಖಾಂಡ್ನ ವಿವಿಧ ವಿಶ್ವವಿದ್ಯಾಲಯ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಹಂತ ಹಂತವಾಗಿ ಕರ್ನಾಟಕಕ್ಕೆ ಬಂದು ತಮ್ಮ ಸಾಂಸ್ಕೃತಿಕ ಪರಂಪರೆಗಳ ಪ್ರದರ್ಶನ ಮಾಡಲಿದ್ದಾರೆ. ಹಾಗೆಯೇ ಕರ್ನಾಟಕ ವಿದ್ಯಾರ್ಥಿಗಳು ಜಾರ್ಖಾಂಡ್ಗೆ ಹೋಗಿ ಕಲೆ, ಸಂಸ್ಕೃತಿಯ ಪ್ರದರ್ಶನ ಮಾಡಲಿದ್ದಾರೆ.
ಇದಕ್ಕಾಗಿ ಪ್ರತ್ಯೇಕ ತಂಡಗಳನ್ನು ರಚನೆ ಮಾಡಲಾಗಿದ್ದು, ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಸಂಬಂಧಪಟ್ಟ ಕಾಲೇಜುಗಳು ಕಡ್ಡಾಯವಾಗಿ ಇದನ್ನು ಅನುಷ್ಠಾನ ಮಾಡಬೇಕಿದೆ. ಕರ್ನಾಟಕ-ಜಾರ್ಖಂಡ್, ಆಂಧ್ರ ಪ್ರದೇಶ-ಪಂಜಾಬ್, ಜಮ್ಮು ಕಾಶ್ಮೀರ-ತಮಿಳುನಾಡು, ಹರಿಯಾಣ ತೆಲಂಗಾಣ, ಗುಜರಾತ್-ಛತ್ತಿಸ್ಗಡ್, ಮಹಾರಾಷ್ಟ್ರ-ಒಡಿಶಾ, ಅಸ್ಸಾಂ-ರಾಜಸ್ತಾನ್ ಹೀಗೆ ಎರಡೆರೆಡು ರಾಜ್ಯಗಳ ಗುಂಪು ಮಾಡಲಾಗಿದೆ. ಅಲ್ಲಿನ ವಿದ್ಯಾರ್ಥಿಗಳು ಇಲ್ಲಿಗೆ ಬಂದು ಇಲ್ಲಿನ ವಿದ್ಯಾರ್ಥಿಗಳು ಅಲ್ಲಿಗೆ ಹೋಗಿ ಏಕ್ ಭಾರತ್ ಶ್ರೇಷ್ಠಭಾರತ್ ಕಾರ್ಯಕ್ರಮ ನಡೆಸಿಕೊಡಬೇಕಿದೆ. ಬೇರೆ ರಾಜ್ಯದಿಂದ ಬರುವ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಆತಿಥ್ಯ ನೀಡಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ