27ಕ್ಕೆ ಪ್ರವಾಸೋದ್ಯಮ ದಿನ: ರಾಜ್ಯಾದ್ಯಂತ ಕಾರ್ಯಕ್ರಮ
Team Udayavani, Sep 24, 2019, 3:00 AM IST
ಬೆಂಗಳೂರು: ವಿಶ್ವ ಪ್ರವಾಸೋದ್ಯಮ ದಿನ ಅಂಗವಾಗಿ ಸೆ. 27ರಂದು ರಾಜ್ಯಾದ್ಯಂತ ಹಲವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಪ್ರವಾಸೋದ್ಯಮ ಮತ್ತು ಉದ್ಯೋಗದಲ್ಲಿ ಸರ್ವರಿಗೂ ಉಜ್ವಲ ಭವಿಷ್ಯ’ ಘೋಷವಾಕ್ಯದಡಿ ಈ ಬಾರಿಯ ಪ್ರವಾಸೋದ್ಯಮ ದಿನ ಆಚರಿಸಲಾಗುತ್ತಿದೆ.
ಭಾರತದ ಪ್ರವಾಸೋದ್ಯಮ ವಿಶ್ವಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಕರ್ನಾಟಕ ರಾಜ್ಯವು 319 ಪ್ರವಾಸಿ ತಾಣಗಳನ್ನು ಪ್ರವಾಸಿಗರಿಗೆ ಪರಿಚಯಿಸುವ ಕಾರ್ಯ ಮಾಡಲಿದೆ ಎಂದು ತಿಳಿಸಿದರು. ವಿಶ್ವ ಪ್ರವಾಸೋದ್ಯಮ ದಿನ ಸಂಬಂಧ ಪ್ರತಿ ಜಿಲ್ಲೆಗೆ 30 ಸಾವಿರ ರೂ. ಬಿಡುಗಡೆ ಮಾಡಲಾಗಿದ್ದು ಬೆಂಗಳೂರಿನಲ್ಲಿ ಎಂ.ಎಸ್.ರಾಮಯ್ಯ ಕಾಲೇಜಿನ ಸಹಯೋಗದಡಿ ಚರ್ಚಾಕೂಟ, ರಸಪ್ರಶ್ನೆ, ಛಾಯಾಚಿತ್ರ ಸ್ಪರ್ಧೆಹಮ್ಮಿಕೊಳ್ಳಲಾಗಿದೆ.
ಅಂದು ಬೆಂಗಳೂರಿನ ಬಸವನಗುಡಿಯಿಂದ ಅರಮನೆ ಮೈದಾನದವರೆಗಿನ ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ ಮಾಡಲಾಗುವುದು. ಅರಮನೆ ಮೈದಾನದ ವರೆಗೆ ಸೈಕಲ್ ಜಾಥಾ ಇರಲಿದೆ. ಈ ವೇಳೆ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಲಾಗುವುದು ಎಂದರು.
ಪ್ರವಾಸೋದ್ಯಮಕ್ಕೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಹೊರ ರಾಜ್ಯಗಳ ವಾಹನಗಳ ಪ್ರವೇಶ ತೆರಿಗೆ ಕಡಿತಗೊಳಿಸುವ ಪ್ರಸ್ತಾವವಿದೆ. ಒಂದು ದೇಶ-ಒಂದು ತೆರಿಗೆ ವಿಧಾನ ಅಳವಡಿಸಿಕೊಂಡರೆ ಇದಕ್ಕೆ ಪರಿಹಾರ ಸಾಧ್ಯ. ಹೀಗೆ ಹೇಳಿದರೆ ಕೆಲವರು ಸಿಟ್ಟಾಗುತ್ತಾರೆ. ಸರ್ವಾಧಿ ಕಾರ ಧೋರಣೆ ಎಂದು ಹೇಳುತ್ತಾರೆ. ಆದರೆ, ಇದರ ಬಗ್ಗೆ ಚರ್ಚೆಯಾಗಬೇಕು.
-ಸಿ.ಟಿ.ರವಿ, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ