ವಿಷ ಗಾಳಿ ಸೇವಿಸಿ ಯೋಧನ ಮಕ್ಕಳಿಬ್ಬರ ಸಾವು
Team Udayavani, Oct 31, 2019, 3:00 AM IST
ರಾಯಬಾಗ: ಕಾಳುಗಳಿಗೆ ಲೇಪನ ಮಾಡಿದ ರಾಸಾಯನಿಕದ ಗಾಳಿ ಸೇವಿಸಿ ಯೋಧನ ಮಕ್ಕಳಿಬ್ಬರು ಮೃತಪಟ್ಟಿದ್ದು, ಪತ್ನಿ ಅಸ್ವಸ್ಥರಾದ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ. ಯೋಧ ಹನಮಂತ ಕುಂಬಾರ ಮತ್ತು ಕವಿತಾ ದಂಪತಿಯ ಮಕ್ಕಳಾದ ಜಯಶ್ರೀ (6) ಐಶ್ವರ್ಯ(4) ಮೃತಪಟ್ಟವರು. ಯೋಧನ ಸೋದರ ಆಹಾರಧಾನ್ಯ ವ್ಯಾಪಾರ ಮಾಡುತ್ತಿದ್ದರು. ಅದಕ್ಕಾಗಿ ಮನೆಯಲ್ಲೇ ಕಾಳುಕಡ್ಡಿ ಸಂಗ್ರಹಿಸಿಟ್ಟಿದ್ದರು.
ಅವು ಕೆಡದಂತೆ ರಾಸಾಯನಿಕ ಲೇಪನ ಮಾಡಲಾಗಿತ್ತು. ಅದೇ ಕೋಣೆಯಲ್ಲಿ ಮಲಗಿದ್ದ ಯೋಧನ ಪತ್ನಿ ಹಾಗೂ ಮಕ್ಕಳು ರಾತ್ರಿ ತೀವ್ರ ಅಸ್ವಸ್ಥಗೊಂಡರು. ಮಕ್ಕಳು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರೆ, ತಾಯಿ ಮೀರಜ್ನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಯೋಧ ಹನುಮಂತ ಕಳೆದ ಹತ್ತು ವರ್ಷಗಳಿಂದ ಆಸ್ಸಾಂನ ಗುವಾಹಟಿಯಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…