ಕೆಲ ರೈಲುಗಳ ಸಂಚಾರ ರದ್ದು
Team Udayavani, Oct 22, 2019, 3:00 AM IST
ಹುಬ್ಬಳ್ಳಿ: ಮಂಕಿ ಹಿಲ್ ಹಾಗೂ ಕರ್ಜತ್ ನಿಲ್ದಾಣಗಳ ಮಧ್ಯೆ ರೈಲು ಸಂಬಂಧಿತ ಕಾರ್ಯದ ನಿಮಿತ್ತ ಕೆಲ ರೈಲುಗಳ ಸೇವೆ ರದ್ದುಪಡಿಸಲಾಗಿದೆ. ಅ.22, 23, 27, 28, 29, 30ರಂದು ಛತ್ರಪತಿ ಶಿವಾಜಿ ಟರ್ಮಿನಸ್ ಮುಂಬೈ-ವಿಜಯಪುರ (51029) ಪ್ಯಾಸೆಂಜರ್ ರೈಲು ಸೇವೆ ರದ್ದುಪಡಿಸಲಾಗಿದೆ. ಅ. 22, 23, 24, 28, 29, 30 ಹಾಗೂ 31ರಂದು ವಿಜಯಪುರ-ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್(51030) ಪ್ಯಾಸೆಂಜರ್ ರೈಲನ್ನು ರದ್ದುಗೊಳಿಸಲಾಗಿದೆ.
ಅ.22ರಿಂದ 31ರವರೆಗೆ ಹುಬ್ಬಳ್ಳಿ-ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್ಪ್ರೆಸ್ (17317) ರೈಲು ಪುಣೆವರೆಗೆ ಮಾತ್ರ ಸಂಚರಿಸಲಿದೆ. ಅ.22ರಿಂದ ನ.1ರವರೆಗೆ ಲೋಕಮಾನ್ಯ ತಿಲಕ್ ಟರ್ಮಿನಸ್ (17318) ಎಕ್ಸ್ಪ್ರೆಸ್ ರೈಲು ಪುಣೆಯಿಂದ ಪ್ರಯಾಣ ಆರಂಭಿಸಲಿದೆ. ಅ.22ರಿಂದ ಯಶವಂತಪುರ-ವಿಜಯಪುರ (06541/06542) ಎಕ್ಸ್ಪ್ರೆಸ್ ವಿಶೇಷ ರೈಲಿಗೆ ಮರಿಯಮ್ಮನಹಳ್ಳಿ, ಮಲ್ಲಾಪುರ, ಗುಳೇದಗುಡ್ಡ ರೋಡ್ ನಿಲ್ದಾಣಗಳಲ್ಲಿ ನಿಲುಗಡೆ ಕಲ್ಪಿಸಲಾಗುವುದು ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ