ಶಿರಾಡಿಘಾಟ್ನಲ್ಲಿ ಮಣ್ಣು ಕುಸಿತ
ಕಾರವಾರ-ಬೆಂಗಳೂರು ರೈಲು ಸಂಚಾರದಲ್ಲಿ ವಿಳಂಬ
Team Udayavani, Jul 5, 2019, 5:21 AM IST
ಬೆಂಗಳೂರು: ಗುರುವಾರ ಮುಂಜಾನೆ 8.30ಕ್ಕೆ ಅಂತ್ಯ ಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾ ವಳಿಯ ಬಹುತೇಕ ಕಡೆ, ಉತ್ತರ ಒಳನಾಡಿನ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ರಾಜ್ಯದಲ್ಲಿಯೇ ಅಧಿಕ, 9 ಸೆಂ.ಮೀ.ಮಳೆಯಾಗಿದೆ.
ಈ ಮಧ್ಯೆ, ಸಕಲೇಶಪುರ ಬಳಿ ಶಿರಾಡಿಘಾಟ್ನ ಶಿರಿವಾಗಿಲು ರೈಲ್ವೆ ನಿಲ್ದಾಣದ ಸಮೀಪ ರೈಲ್ವೆ ಹಳಿಯ ಮೇಲೆ ಗುರುವಾರ ಮಧ್ಯಾಹ್ನ ಸಸ1 ಗಂಟೆಯ ವೇಳೆಗೆ ಗುಡ್ಡ ಕುಸಿದು ರೈಲ್ವೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇದರಿಂದಾಗಿ ಕಾರವಾರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ರೈಲಿನ ಸಂಚಾರವನ್ನು ಮಾರ್ಗ ಮಧ್ಯೆ ತಡೆ ಹಿಡಿಯಲಾಗಿತ್ತು. ಬಳಿಕ, ರೈಲ್ವೆ ಸಿಬ್ಬಂದಿ ಆಗಮಿಸಿ, ಮಣ್ಣು ತೆರವುಗೊಳಿಸಿ ಸಂಜೆ 5 ಗಂಟೆಗೆ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಿದರು. ಇದರಿಂದಾಗಿ ರೈಲು ಬೆಂಗಳೂರು ತಲುಪುವುದು ಸುಮಾರು 2 ಗಂಟೆ ತಡವಾಯಿತು.
ಈ ಮಧ್ಯೆ, ಶನಿವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ಉತ್ತರ ಒಳನಾಡಿನ ಹಲವು ಕಡೆ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಲಿದೆ. ಪಶ್ಚಿಮ ಕರಾವಳಿಯಲ್ಲಿ ಜು.5, ಶುಕ್ರವಾರ ಮಧ್ಯರಾತ್ರಿಯವರೆಗೆ ಉಬ್ಬರದಲೆಗಳು ಉಂಟಾಗುವ ಸಂಭವವಿದ್ದು, ತೀರ ಪ್ರದೇಶದ ಜನರು ಎಚ್ಚರಿಕೆ ವಹಿಸಬೇಕು. ಅರಬ್ಬಿ ಸಮುದ್ರದಲ್ಲಿ ಬಲವಾದ ಗಾಳಿ ಜು.8ರ ವರೆಗೂ ಬೀಸಲಿದ್ದು, ಮೀನುಗಾರರು ಸಮುದ್ರಕ್ಕಿಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ