ಬೆಂಗಳೂರು- ಮಂಗಳೂರು ನಡುವಿನ ಎಲ್ಲ ರೈಲು ರದ್ದು
ಇಂದಿನಿಂದ 4 ದಿನ ವಿವಿಧ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
Team Udayavani, Mar 17, 2022, 7:10 AM IST
ಹುಬ್ಬಳ್ಳಿ ನೈಋತ್ಯ ರೈಲ್ವೇ ವಲಯ ಪಡೀಲ್ ಮತ್ತು ಕುಲಶೇಖರ ನಿಲ್ದಾಣಗಳ ನಡುವೆ ಜೋಡು ಮಾರ್ಗ ಕಾಮಗಾರಿ ನಿಮಿತ್ತ ಕೆಲವು ರೈಲುಗಳ ಸೇವೆ ರದ್ದುಗೊಳಿಸಲಿದೆ.
ಮಾ.17ರಿಂದ 20ರ ವರೆಗೆ ಸುಬ್ರಹ್ಮಣ್ಯ ರೋಡ್-ಮಂಗಳೂರು ಸೆಂಟ್ರಲ್ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು (06488) ಸೇವೆಯು ಸುಬ್ರಹ್ಮಣ್ಯ ರೋಡ್ ನಿಲ್ದಾಣದಿಂದ ಹಾಗೂ ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರೋಡ್ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು (06489) ಸೇವೆಯು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹಾಗೂ ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು (06487) ಸೇವೆಯು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹಾಗೂ ಕಬಕ ಪುತ್ತೂರು-ಮಂಗಳೂರು ಸೆಂಟ್ರಲ್ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು (06486) ಸೇವೆಯು ಕಬಕ ಪುತ್ತೂರು ನಿಲ್ದಾಣದಿಂದ ಹಾಗೂ ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್ ರೈಲು (16575) ಸೇವೆಯು ಯಶವಂತಪುರ ನಿಲ್ದಾಣದಿಂದ ಸಂಚರಿಸುವುದಿಲ್ಲ.