ಕೆಪಿಟಿಸಿಎಲ್‌ ವಿದ್ಯುತ್‌ಲೈನ್‌ ತುಂಡು: ರೈಲು ಸಂಚಾರದಲ್ಲಿ ವ್ಯತ್ಯಯ


Team Udayavani, Apr 25, 2022, 6:50 AM IST

ಕೆಪಿಟಿಸಿಎಲ್‌ ವಿದ್ಯುತ್‌ಲೈನ್‌ ತುಂಡು: ರೈಲು ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ಯಶವಂತಪುರ- ಲೊಟ್ಟೆಗೊಲ್ಲಹಳ್ಳಿ ನಡುವೆ ಹಾದುಹೋಗಿರುವ ಕರ್ನಾಟಕ ವಿದ್ಯುತ್‌ ಸರಬರಾಜು ಕಂಪೆನಿ (ಕೆಪಿಟಿಸಿಎಲ್‌) ವಿದ್ಯುತ್‌ ಲೈನ್‌ ಭಾನುವಾರ ಬೆಳಿಗ್ಗೆ ತುಂಡಾಗಿ ರೈಲ್ವೆ ವಿದ್ಯುತ್‌ ಲೈನ್‌ ಮೇಲೆ ಬಿದ್ದಿದ್ದರಿಂದ ಸುಮಾರು ನಾಲ್ಕು ತಾಸು ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಯಿತು. ಇದರಿಂದ ಸಾವಿರಾರು ಪ್ರಯಾಣಿಕರು ಪರದಾಡುವಂತಾಯಿತು.

ಬೆಳಿಗ್ಗೆ 8.45ರ ಸುಮಾರಿಗೆ ಆಕಸ್ಮಿಕವಾಗಿ ಕೆಪಿಟಿಸಿಎಲ್‌ನ ವಿದ್ಯುತ್‌ ಲೈನ್‌, ರೈಲ್ವೆ ವಿದ್ಯುತ್‌ ಲೈನ್‌ ಮೇಲೆ ತುಂಡಾಗಿ ಬಿದ್ದಿದೆ. ಇದರಿಂದ ಯಶವಂತಪುರ- ಲೊಟ್ಟೆಗೊಲ್ಲಹಳ್ಳಿ ಮಾರ್ಗದುದ್ದಕ್ಕೂ ಕಾರ್ಯಾಚರಣೆ ಮಾಡುತ್ತಿದ್ದ ರೈಲುಗಳು ಅಲ್ಲಲ್ಲೇ ನಿಂತವು. ಇದಲ್ಲದೆ, ಬೆಂಗಳೂರಿನಿಂದ ಬೇರೆ ಕಡೆಗೆ ತೆರಳುವ ರೈಲುಗಳ ಸೇವೆಯಲ್ಲೂ ವಿಳಂಬವಾಯಿತು. ಮೂಲಗಳ ಪ್ರಕಾರ ಹತ್ತಕ್ಕೂ ಹೆಚ್ಚು ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.

ಪ್ರಮುಖವಾಗಿ ಯಶವಂತಪುರ-ಯಲಹಂಕ ಮತ್ತು ಯಶವಂತಪುರ-ತುಮಕೂರು ಮಾರ್ಗದಲ್ಲಿನ 7ರಿಂದ 8 ರೈಲುಗಳ ಆಗಮನ ಮತ್ತು ನಿರ್ಗಮನದಲ್ಲಿ ತಡವಾಯಿತು. ದೂರದ ಊರಿಗೆ ತೆರಳುವವರು ಮತ್ತು ಆಗಮಿಸುವವರು ಅದೇ ರೀತಿ, ಕಾರ್ಯನಿಮಿತ್ತ ನಗರಕ್ಕೆ ಬರುವವರಿಗೆ ಇದರಿಂದ ಕಿರಿಕಿರಿ ಆಯಿತು. ಅಲ್ಪಾವಧಿಯಲ್ಲೇ ಮೂರನೇ ಬಾರಿ ಈ ರೀತಿ ತಾಂತ್ರಿಕ ಕಾರಣಗಳಿಂದ ತೊಂದರೆ ಆಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಆದರೆ, ರಜೆ ದಿನವಾಗಿದ್ದರಿಂದ ಹೆಚ್ಚು ಪ್ರಯಾಣಿಕರಿಗೆ ಇದರ ಬಿಸಿ ತಟ್ಟಲಿಲ್ಲ.

ಈ ಮಧ್ಯೆ 9.20ರ ವೇಳೆಗೆ ಬೆಂಗಳೂರು ರೈಲ್ವೆ ವಿಭಾಗದಿಂದ ಡೀಸೆಲ್‌ ಆಧಾರಿತ ಲೋಕೋಮೋಟಿವ್‌ ವ್ಯವಸ್ಥೆ ಮಾಡಿ, ರೈಲುಗಳ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಯಿತು. ಈ ಮೂಲಕ ಸಾಧ್ಯವಾದಷ್ಟು ವಿಳಂಬವಾಗುವುದನ್ನು ತಗ್ಗಿಸಲಾಯಿತು ಎಂದು ಬೆಂಗಳೂರು ರೈಲ್ವೆ ವಿಭಾಗೀಯ ಅಧಿಕಾರಿಗಳು ತಿಳಿಸಿದ್ದಾರೆ.

ಯಾವ್ಯಾವ ರೈಲುಗಳು ಎಷ್ಟು ವಿಳಂಬ?  ರೈಲು ಸಂಖ್ಯೆ ಎಷ್ಟು ತಡ?
06266 (ಹಿಂದುಪುರ-ಕೆಎಸ್‌ಆರ್‌ ಬೆಂಗಳೂರು) 87 ನಿಮಿಷ (ಯಶವಂತಪುರ ಬಳಿ)
16574 (ಯಶವಂತಪುರ ವೀಕ್ಲಿ ಎಕ್ಸ್‌ಪ್ರೆಸ್‌) 176 ನಿಮಿಷ (ಯಶವಂತಪುರ ಬಳಿ)
06546 (ಯಶವಂತಪುರ ಎಕ್ಸ್‌ಪ್ರೆಸ್‌ ಸ್ಪೇಷಲ್‌) 98 ನಿಮಿಷ (ಚಿಕ್ಕಬಾಣಾವರ ಬಳಿ)
20652 (ತಾಳಗುಪ್ಪಾ- ಕೆಎಸ್‌ಆರ್‌ ಬೆಂಗಳೂರು, ಇಂಟರ್‌ಸಿಟಿ ಎಕ್ಸ್‌ಪ್ರೆಸ್‌) 60 ನಿಮಿಷ (ಗೊಲ್ಲಹಳ್ಳಿ ಬಳಿ)
17308 ( ಬಸವ ಎಕ್ಸ್‌ಪ್ರೆಸ್‌) 177 ನಿಮಿಷ (ಯಲಹಂಕ)
17310 ( ಯಶವಂತಪುರ -ವಾಸ್ಕೋಡಗಾಮ ಎಕ್ಸ್‌ಪ್ರೆಸ್‌) 38 ನಿಮಿಷ (ದೊಡ್ಡಬೆಲೆ ಬಳಿ)

ಒಂದೂವರೆ ತಿಂಗಳಲ್ಲಿ 3ನೇ ಘಟನೆ!
– ಕೇವಲ ಒಂದೂವರೆ ತಿಂಗಳ ಅಂತರದಲ್ಲಿ ಬೆಂಗಳೂರು ವಿಭಾಗದ ವ್ಯಾಪ್ತಿಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಆಗುತ್ತಿರುವ ಮೂರನೇ ಘಟನೆ ಇದಾಗಿದೆ.
– ಮಾರ್ಚ್‌ 9ರಂದು ಚನ್ನಸಂದ್ರ ಕಾರಿಡಾರ್‌ನಲ್ಲಿ ರೈಲ್ವೆ ವಿದ್ಯುತ್‌ ಲೈನ್‌ ತಗುಲಿ ಹದ್ದು ಸಿಲುಕಿದ ಪರಿಣಾಮ ಸುಮಾರು 30ಕ್ಕೂ ಅಧಿಕ ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು.

– ವಿದ್ಯುತ್‌ ಲೈನ್‌ನಲ್ಲಿ ಏನಾಗಿದೆ ಎಂಬುದನ್ನು ಪತ್ತೆಹಚ್ಚಲಿಕ್ಕಾಗಿಯೇ ಗಂಟೆಗಟ್ಟಲೆ ಸಮಯ ಹಿಡಿದಿತ್ತು.

– ಇದಾದ ಬಳಿಕ ಹತ್ತು ದಿನಗಳಲ್ಲಿ ಅಂದರೆ ಮಾರ್ಚ್‌ 21ರಂದು ಬೆಂಗಳೂರು- ಮೈಸೂರು ನಡುವಿನ ರೈಲು ಮಾರ್ಗದಲ್ಲಿ ವಿದ್ಯುತ್‌ ಕೇಬಲ್‌ ತುಂಡಾದ ಪರಿಣಾಮ ರೈಲುಗಳ ಸೇವೆಯಲ್ಲಿ ವ್ಯತ್ಯಯ ಆಗಿತ್ತು. ಮೆಮು ರೈಲು ಮತ್ತು ಚಾಮುಂಡಿ ಎಕ್ಸ್‌ಪ್ರೆಸ್‌ ರೈಲುಗಳು ಸಂಚಾರದಲ್ಲಿ ಸುಮಾರು ಒಂದು ತಾಸು ತಡವಾಗಿತ್ತು.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.