ವರ್ಗಾವಣೆ ಮಿತಿ ಶೇ.2ರಿಂದ 6ಕ್ಕೆ ಹೆಚ್ಚಳ
Team Udayavani, Jun 21, 2019, 5:41 AM IST
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಸಂಬಂಧ ಶೇ.2ರಿಂದ 6ಕ್ಕೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
2019-20ನೇ ಸಾಲಿಗೆ ನಿಗದಿಪಡಿಸಿರುವ ವರ್ಗಾವಣೆ ಮಿತಿಯನ್ನು ಒಟ್ಟಾರೆ ಕಾರ್ಯನಿರತ ವೃಂದಬಲದ ಶೇ.2ಕ್ಕೆ ಬದಲಾಗಿ ಶೇ.6ಕ್ಕೆ ನಿಗದಿಪಡಿಸಲಾಗಿದೆ. ಈ ವರ್ಗಾವಣೆ ಯನ್ನು ಅನುಷ್ಠಾನಗೊಳಿಸುವಾಗ ಖಾಲಿ ಹುದ್ದೆಗಳು ವಿವಿಧ ಜಿಲ್ಲೆಗಳಲ್ಲಿ ಸಮನಾಗಿ ಹಂಚಿಕೆಯಾಗಿರುವಂತೆಯೂ ನೋಡಿ ಕೊಳ್ಳುವಂತೆ ಎಲ್ಲ ಸಕ್ಷಮ ಪ್ರಾಧಿಕಾರಿಗಳಿಗೆ ಸೂಚಿಸಲಾಗಿದೆ.
ಪ್ರಸ್ತುತ ಇರುವ ಸರ್ಕಾರಿ ನೌಕರರ ಕಾರ್ಯನಿರತ ವೃಂದ ಬಲವನ್ನು ಪರಿಗಣಿಸಿದಲ್ಲಿ ಈಗಾಗಲೇ ವರ್ಗಾವಣೆಗೆ ನಿಗದಿ ಗೊಳಿಸಿರುವ ಮಿತಿಯು ತುಂಬಾ ಕಡಿಮೆಯಾಗಿರುವುದನ್ನು ಮನಗಂಡು ಶೇ.2ರ ಮಿತಿ ಹೆಚ್ಚಿಸುವ ತೀರ್ಮಾನ ಕೈಗೊಳ್ಳ ಲಾಗಿದೆ. ವರ್ಗಾವಣೆ ಪ್ರಕ್ರಿಯೆ ಈಗಾಗಲೇ ಪ್ರಾರಂಭ ವಾಗಿದ್ದು ಜೂ.30ರವರೆಗೆ ಗಡುವು ನೀಡಲಾಗಿದೆ.
ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ನೆಲೆಸಿರುವ ಕಚೇರಿಗಳಿಗೆ ಸ್ಥಳೀಯ ವೃಂದ ಮತ್ತು ಮಿಕ್ಕುಳಿದ ವೃಂದ ಗಳಲ್ಲಿನ ವಿವಿಧ ವೃಂದದ ಹುದ್ದೆಗಳಲ್ಲಿ ಖಾಲಿ ಇರುವ ಹುದ್ದೆ ಗಳಿಗೆದುರಾಗಿ ನೇಮಕಾತಿ ಹೊಂದಿರುವ ನೌಕರರನ್ನು ಅವರ ನೇಮಕಾತಿ ದಿನಾಂಕದಿಂದ ಕನಿಷ್ಠ 10 ವರ್ಷಗಳವರೆಗೂ ಹೈ-ಕ ಪ್ರದೇಶ ಹೊರತುಪಡಿಸಿ ಬೇರೆಡೆಗೆ ವರ್ಗಾವಣೆ ಮಾಡತಕ್ಕದ್ದಲ್ಲ ಎಂಬ ಅಂಶವನ್ನೂ ಮತ್ತೂಮ್ಮೆ ಎಲ್ಲ ಸಕ್ಷಮ ಪ್ರಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್