ನ್ಯಾ. ಎಸ್.ಎನ್. ಸತ್ಯನಾರಾಯಣ ವರ್ಗ
Team Udayavani, Mar 10, 2020, 3:02 AM IST
ಬೆಂಗಳೂರು: ರಾಜ್ಯ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿ ಎಸ್.ಎನ್.ಸತ್ಯನಾರಾಯಣ ಅವರನ್ನು ಪಂಜಾಬ್-ಹರಿಯಾಣ ಹೈಕೋರ್ಟ್ಗೆ ವರ್ಗಾವಣೆ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಸುಪ್ರೀಂಕೋರ್ಟ್ ಕೊಲಿಜಿಯಂ ಮಾ. 5ರಂದು ನಡೆಸಿದ ಸಭೆಯಲ್ಲಿ ನ್ಯಾ. ಸತ್ಯನಾರಾಯಣ ಅವರ ವರ್ಗಾವಣೆಗೆ ಶಿಫಾರಸು ಮಾಡುವ ನಿರ್ಣಯ ಕೈಗೊಂಡಿತು.
ನ್ಯಾ. ಎಸ್.ಎನ್.ಸತ್ಯನಾರಾಯಣ ಅವರು 1959ರ ಜ.15ರಂದು ಜನಿಸಿದ್ದರು. 1983ರ ಏ.22ರಂದು ವಕೀಲಿ ವೃತ್ತಿ ಆರಂಭಿಸಿದರು. ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳಲ್ಲಿ ಪರಿಣಿತರಾದ ಅವರು, ವಿಶೇಷ ಸರ್ಕಾರಿ ಅಭಿಯೋಜಕರಾಗಿಯೂ ಕಾರ್ಯ ನಿರ್ವಹಿಸಿದ್ದರು. 2008ರ ಜೂನ್ 9ರಂದು ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕ ಗೊಂಡ ಅವರು, 2012ರ ಜೂನ್ 8ರಂದು ಕಾಯಂ ಆಗಿ ದ್ದರು. ರಾಜ್ಯ ಹೈಕೋರ್ಟ್ ನಲ್ಲಿ ಕಳೆದ 11 ವರ್ಷಗಳಿಂದ ನ್ಯಾಯಮೂರ್ತಿಯಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ