Officers ವರ್ಗಾವಣೆಯೇ ಸರಕಾರದ ಸಾಧನೆ: ಶ್ರೀರಾಮುಲು ವ್ಯಂಗ್ಯ
Team Udayavani, Sep 1, 2023, 11:21 PM IST
ಬೀದರ್: ವಿಧಾನಸೌಧದ ಮೂರನೇ ಮಹಡಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಧಿಕಾರಿಗಳ ವರ್ಗಾವಣೆಯೇ ಕಾಂಗ್ರೆಸ್ ಸರಕಾರದ ನೂರು ದಿನಗಳ ಸಾಧನೆಯಾಗಿದ್ದು, 50 ಪರ್ಸಂಟೇಜ್ ಹಣ ಕೊಡದಿದ್ದರೆ ಯಾರಿಗೂ ಎನ್ಒಸಿ ಕೊಡುತ್ತಿಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮಲು ಆರೋಪಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ತಮ್ಮ ಸರಕಾರದ ಯೋಜನೆಗಳು ಮತ್ತು ಸರಕಾರಕ್ಕೆ ನೂರು ದಿನಗಳ ಪೂರೈಕೆ ಬಗ್ಗೆ ಎಲ್ಲಿಯೂ ಮಾತನಾಡುವುದಿಲ್ಲ. ಕೇವಲ ಪ್ರಧಾನಿ ಮೋದಿ ಅವರಿಗೆ ಟೀಕಿಸುವುದಷ್ಟೇ ಅವರ ಕೆಲಸವಾಗಿದೆ. ಕಾಂಗ್ರೆಸ್ನಲ್ಲಿ ಎತ್ತು ಏರಿಗೆ ಎಳೆದರೆ ಕೋಣ ನೀರಿಗೆ ಎಳೆಯಿತು ಎಂಬಂಥ ಪರಿಸ್ಥಿತಿ ಇದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವರ ನಡುವೆ ಹೊಂದಾಣಿಕೆಯೇ ಇಲ್ಲ. ಅಭಿವೃದ್ಧಿ ವಿಚಾರದಲ್ಲಿ ಯಾವೊಬ್ಬ ಶಾಸಕರಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಬಿಜೆಪಿ ಘೋಷಣೆ ಮಾಡಿರುವ ಎಲ್ಲ ಕಾರ್ಯಕ್ರಮಗಳನ್ನು ನಿಲ್ಲಿಸಲಾಗಿದೆ. ಎಂದು ಆರೋಪಿಸಿದರು.
ಕೆಲವರಿಗೆ ಮಾತ್ರ ಬಿಟ್ಟಿಭಾಗ್ಯಗಳು
ರಾಜ್ಯ ಸರಕಾರದ ಬಿಟ್ಟಿ ಭಾಗ್ಯಗಳು ಬಹಳ ದಿನಗಳವರೆಗೆ ಮುಂದುವರಿಯಲ್ಲ. ಪಂಚ ಗ್ಯಾರಂಟಿಗಳು ರಾಜ್ಯದ ಎಲ್ಲ ಜನತೆಗೆ ಸಿಗುತ್ತಿಲ್ಲ, ಕೆಲವರಿಗಷ್ಟೇ ಮಾತ್ರ ಉಪಯೋಗವಾಗುತ್ತಿದೆ ಎಂದು ಕಲಬುರಗಿಯಲ್ಲಿ ಶ್ರೀರಾಮುಲು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ