ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ
Team Udayavani, May 31, 2023, 8:30 AM IST
ಬೆಂಗಳೂರು: ನೂತನ ಸರಕಾರವು ರಾಜ್ಯ ಸರಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಒಪ್ಪಿಗೆ ಸೂಚಿಸಿದೆ. ಇದರೊಂದಿಗೆ ಆಡಳಿತ ಪಕ್ಷದ ಶಾಸಕರು ಕ್ಷೇತ್ರಗಳಲ್ಲಿ ತಮಗೆ ಬೇಕಾದ ಅಧಿಕಾರಿ/ನೌಕರರನ್ನು ವರ್ಗಾವಣೆ ಮಾಡಿಸಿಕೊಳ್ಳಲು ಅವಕಾಶ ದೊರೆತಿದೆ.
2023-24ರ ಸಾಲಿಗೆ ಗ್ರೂಪ್ ಎ, ಬಿ, ಸಿ, ಡಿ ವರ್ಗದ ಅಧಿಕಾರಿ ಮತ್ತು ನೌಕರರಿಗೆ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ. 6 ಮೀರದಂತೆ ಜೂ. 1ರಿಂದ 15ರ ಒಳಗೆ ವರ್ಗಾವಣೆ ಪ್ರಕ್ರಿಯೆ ಮುಗಿಸುವಂತೆ ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆ ಆದೇಶ ಹೊರಡಿಸಿದೆ. ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖೆಯ ಸಚಿವರಿಗೆ ಅಧಿಕಾರ ನೀಡಲಾಗಿದೆ.
ಈ ಹಿಂದೆ ಬಿಜೆಪಿ ಸರಕಾರ ಅಧಿಕಾರ ಇದ್ದಾಗ ನೇಮಕಗೊಂಡಿದ್ದ ಅಧಿಕಾರಿಗಳು ಹಾಗೂ ನೌಕರರನ್ನು ವರ್ಗಾವಣೆ ಮಾಡಬೇಕು ಎಂಬುದು ಶಾಸಕರ ಒತ್ತಾಯ ಆಗಿತ್ತು. ತಮಗಿಷ್ಟ ಬಂದ ಅಧಿಕಾರಿಗಳು-ನೌಕರರನ್ನೇ ಸ್ಥಳೀಯವಾಗಿ ಶಾಸಕರು ವರ್ಗಾವಣೆ ಮಾಡಿಸಿಕೊಳ್ಳುವುದು ಹಲವು ವರ್ಷಗಳಿಂದ ನಡೆದುಬಂದಿದೆ. ಈಗ ಸರಕಾರ ಬದಲಾಗಿರುವುದರಿಂದ ಶಾಸಕರ ಒತ್ತಾಸೆ ಮೇರೆಗೆ ಸಿಎಂ ಈ ತೀರ್ಮಾನ ಕೈಗೊಂಡಿದ್ದು, ವರ್ಗಾವಣೆ ಅಧಿಕಾರವನ್ನು ಸಚಿವರಿಗೆ ನೀಡಿರುವುದರಿಂದ ವರ್ಗಾವಣೆಯ ಯಾವುದೇ ಕಡತ ಸಿಎಂ ಸಹಿಗೆ ಹೋಗಬೇಕಾಗಿಲ್ಲ.
ರಿಷ್ಯಂತ್ ದ.ಕ. ಪ್ರಭಾರ ಎಸ್ಪಿ
ಮಂಗಳೂರು: ದ.ಕ. ಜಿಲ್ಲಾ ಪ್ರಭಾರ ಎಸ್ಪಿ ಆಗಿ ರಿಷ್ಯಂತ್ ಸಿ.ಬಿ. ನಿಯೋಜನೆ ಗೊಂಡಿದ್ದಾರೆ. ಎಸ್ಪಿ ಆಗಿದ್ದ ಡಾ| ವಿಕ್ರಂ ಅಮಟೆ ಅನಾರೋಗ್ಯ ನಿಮಿತ್ತ ದೀರ್ಘ ರಜೆಯಲ್ಲಿರುವುದರಿಂದ ಪ್ರಭಾರ ಎಸ್ಪಿ ಆಗಿ ರಿಷ್ಯಂತ್ ಅವರನ್ನು ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್