ನೀತಿ ಸಂಹಿತೆ ನಡುವೆಯೂ ಅಧಿಕಾರಿಗಳ ವರ್ಗಾವಣೆ!
Team Udayavani, Sep 25, 2019, 3:00 AM IST
ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಶಿಕ್ಷಣ ಇಲಾಖೆಯಲ್ಲಿ 5 ಉಪ ನಿರ್ದೇಶಕರು ಮತ್ತು 14 ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾ., ಮೈಸೂರು, ಬೆಳಗಾವಿ ಜಿಲ್ಲೆಗಳಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಇಲ್ಲಿನ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮುನ್ನ ಚುನಾವಣಾ ಆಯೋಗದ ಅನುಮತಿ ಪಡೆಯಬೇಕು.
ಆದರೆ, ಸಂಪುಟ ರಚನೆಗೂ ಮುನ್ನ ಮುಖ್ಯಮಂತ್ರಿಗಳ ವರ್ಗಾವಣೆ ಪಟ್ಟಿ ಸಿದ್ಧಪಡಿಸಲಾಗಿತ್ತು. ಶಿಕ್ಷಣಾಧಿಕಾರಿಗಳ ವರ್ಗಾವಣೆ ಪಟ್ಟಿ ಸಿದ್ಧವಾಗಿದ್ದ ಕಾರಣ ನೀತಿ ಸಂಹಿತೆ ನಡುವೆಯೂ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಇದು ಹಲವು ಅನುಮಾನಗಳಿಗೆ ಎಡೆ ಮಾಡುಕೊಡುತ್ತಿದೆ ಎಂದು ಇಲಾಖೆಯ ಉನ್ನತ ಮೂಲಗಳು “ಉದಯವಾಣಿ’ಗೆ ತಿಳಿಸಿವೆ.
ವರ್ಗಾವಣೆ ಆದೇಶದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಸ್ .ಎನ್ .ಕನ್ನಯ್ಯ, ಡಿ.ಆರ್ .ಕೃಷ್ಣಮೂರ್ತಿ, ಶಿಕ್ಷಣ ಇಲಾಖೆ ಕೇಂದ್ರ ಕಚೇರಿಯ ಕಿರಿಯ ಸಹಾಯಕ ನಿರ್ದೇಶಕ ಕೆ.ಎನ್ .ಬಲರಾಮ, ಮೈಸೂರಿನ ಆರ್.ರಾಮಾರಾಧ್ಯ, ಪಿರಿಯಾಪಟ್ಟಣದ ಚಿಕ್ಕಸ್ವಾಮಿ, ಆನೇಕಲ್ ತಾಲೂಕಿನ ಕೆ.ಸಿ.ರಮೇಶ್ , ಬೆಂಗಳೂರು ಉತ್ತರ ವಲಯದ ಪ್ರಭಾ ಅಲೆಕ್ಸಾಂಡರ್, ಬೆಳಗಾವಿ ಗ್ರಾಮೀಣ ತಾಲೂಕಿನ ಲೀಲಾವತಿ ಹಿರೇಮಠ ವರ್ಗಾವಣೆಗೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರಾಥಮಿಕ ಮತ್ತು ಫ್ರೌಡ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ , ಈ ಹಿಂದೆಯೇ ಈ ಪಟ್ಟಿ ಸಿದ್ಧಪಡಿಸಲಾಗಿತ್ತು. ಆದರೆ ತಡವಾಗಿ ಆದೇಶ ಹೊರಡಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?