24 ಗಂಟೆಯಲ್ಲಿ ಟ್ರಾನ್ಸ್ಫಾರ್ಮರ್ ಬದಲಾವಣೆ: ಸಚಿವ ವಿ. ಸುನಿಲ್ ಕುಮಾರ್
Team Udayavani, Dec 31, 2021, 6:12 AM IST
ಬೆಂಗಳೂರು: ವಿಫಲಗೊಂಡ ವಿದ್ಯುತ್ ಪರಿವರ್ತಕ (ಟ್ರಾನ್ಸ್ ಫಾರ್ಮರ್) ಬದಲಾವಣೆಗಾಗಿ ವರ್ಷಾನುಗಟ್ಟಲೆ ಹೋರಾಟ ಮಾಡಬೇಕಿದ್ದ ರೈತರ ಬವಣೆಗೆ ರಾಜ್ಯ ಇಂಧನ ಇಲಾಖೆ ಈಗ ಕೊನೆ ಹಾಡಿದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರೈತರ ಟ್ರಾನ್ಸ್ ಫಾರ್ಮರ್ ಬದಲಾವಣೆಯನ್ನು ದೂರು ಸಲ್ಲಿಕೆಯಾದ 24 ಗಂಟೆಯೊಳಗೆ ಮಾಡಬೇಕೆಂಬ ಗುರಿ ಸಾಧನೆಯಲ್ಲಿ ಇಂಧನ ಇಲಾಖೆ ಈಗ ಶೇ. 100ರಷ್ಟು ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದೆ. ರಾಜ್ಯದ ಎಲ್ಲ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಸ್ಥಾಪನೆ ಮಾಡಲಾಗಿದ್ದು, ಸದ್ಯಕ್ಕೆ 10248 ಟ್ರಾನ್ಸ್ ಫಾರ್ಮರ್ಗಳ ದಾಸ್ತಾನು ಲಭ್ಯವಿದೆ. ರೈತರ ಮನವಿಗೆ ಸ್ಪಂದಿಸುವ ಮೂಲಕ ಜನಸ್ನೇಹಿ ಕಾರ್ಯದಲ್ಲಿ ಉಳಿದ ಇಲಾಖೆಗಿಂತ ನಮ್ಮ ಇಲಾಖೆ ಒಂದು ಹೆಜ್ಜೆ ಮುಂದೆ ಸಾಗಿದೆ.
27,637 ಅಳವಡಿಕೆ:
ತಾವು ಅಧಿಕಾರ ಅಳವಡಿಸಿಕೊಂಡ ಆರಂಭದಿಂದ ಇಲ್ಲಿಯವರೆಗೆ ಹಿಂಬಾಕಿ ಬೇಡಿಕೆಯೂ ಸೇರಿ ಎಲ್ಲ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ 27,650 ವಿದ್ಯುತ್ ಪರಿವರ್ತಕಗಳು ವಿಫಲಗೊಂಡಿರುವ ಬಗ್ಗೆ ರೈತರು ದೂರು ದಾಖಲಿಸಿದ್ದರು. ಈ ಪೈಕಿ 21,145 ಪ್ರಕರಣಗಳಲ್ಲಿ 24 ಗಂಟೆಯೊಳಗಾಗಿ ಪರಿವರ್ತಕಗಳನ್ನು ಬದಲಾವಣೆ ಮಾಡಲಾಗಿದೆ. ರಸ್ತೆ ಸಂಪರ್ಕ ಸೇರಿದಂತೆ ಉಳಿದ ಅಡೆತಡೆಗಳು ಇರುವ ಕಡೆಗಳಲ್ಲಿ 24 ಗಂಟೆ ಕಳೆದ ಕೆಲ ತಾಸಿನ ಒಳಗಾಗಿ ಪರಿವರ್ತಕ ಬದಲಾವಣೆ ಮಾಡಿದ ಪ್ರಕರಣ 6492 ಎಂದು ತಿಳಿಸಿದ್ದಾರೆ.
ಹಿಂದೆ ಹೇಗಿತ್ತು ? :
ಈ ಹಿಂದೆ ಪರಿವರ್ತಕ ಬದಲಾವಣೆ ವ್ಯವಸ್ಥೆ ಶೋಚನೀಯವಾಗಿತ್ತು. ರೈತರು ದೂರು ನೀಡಿ ಬದಲಾವಣೆಗೆ ಅರ್ಜಿ ಸಲ್ಲಿಸಿದ ಬಳಿಕ ತಿಂಗಳಾನುಗಟ್ಟಲೆ ಕಾಯಬೇಕಿತ್ತು. ನಾನಾ ಕಾರಣಗಳನ್ನು ನೀಡಿ ವಿಳಂಬ ಮಾಡಲಾಗುತ್ತಿತ್ತು. ಇದರಿಂದ ಕೃಷಿ ಚಟುವಟಿಕೆಗೆ ತೊಂದರೆಯಾಗು ತ್ತಿತ್ತು. ಅಲ್ಲದೆ ವಿಫಲಗೊಂಡ ಪರಿವರ್ತಕಗಳನ್ನು ರೈತರು ಎತ್ತಿನಗಾಡಿ ಅಥವಾ ತಮ್ಮ ವಾಹನಗಳಲ್ಲಿ ಆಯಾ ಸರಬರಾಜು ಕಚೇರಿಗೆ ತಲುಪಿಸುತ್ತಿದ್ದರು. ಆದರೆ ರಾಜ್ಯ ಸರಕಾರ ಈ ಪದ್ಧತಿಯಲ್ಲೂ ಬದಲಾವಣೆ ತಂದಿದೆ. ಈಗ ವಿಫಲಗೊಂಡ ಪರಿವರ್ತಕವನ್ನು ಇಲಾಖೆ ವತಿಯಿಂದಲೇ ಉಚಿತವಾಗಿ ಸಾಗಿಸಿ ಹೊಸ ಟ್ರಾನ್ಸ್ ಫಾರ್ಮರ್ ಸರಬರಾಜು ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!