ಹಠ ಮಾಡದೆ ಮುಷ್ಕರ ವಾಪಸ್ ಪಡೆಯಿರಿ : ಸಾರಿಗೆ ನೌಕರರಿಗೆ ಸಿಎಂ ಮನವಿ
Team Udayavani, Apr 6, 2021, 6:11 PM IST
ಹುಬ್ಬಳ್ಳಿ : ನಾಳೆ ರಾಜ್ಯಾದ್ಯಂತ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಹಠ ಮಾಡದೆ ಮುಷ್ಕರವನ್ನು ವಾಪಸ್ಸು ಪಡೆಯಿರಿ ಎಂದಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ, ನೀವು ಸರ್ಕಾರದ ಮುಂದಿಟ್ಟರುವ 9 ಬೇಡಿಕೆಗಳಲ್ಲಿ 8ನ್ನು ಈಡೇರಿಸಿದ್ದೇವೆ. ಸಾರ್ವಜನಿಕ ಹಿತ ದೃಷ್ಟಿಯಿಂದ ನಾವೆಲ್ಲರೂ ದುಡಿಯಬೇಕು ಎಂದಿದ್ದಾರೆ.
ಸರ್ಕಾರ ಬಿಗಿಯಾಗಿ ಕ್ರಮ ಕೈಗೊಳ್ಳಲು ಅವಕಾಶ ಕೊಡಬೇಡಿ. ಮುಷ್ಕರದ ಹಿನ್ನೆಲೆಯಲ್ಲಿ ನಾವು ಈಗಾಗಲೇ ಪರ್ಯಾಯ ವ್ಯವಸ್ಥೆಯನ್ನು ಮಾಡಿದ್ದೇವೆ ಎಂದಿದ್ದಾರೆ.