ನಾಳೆ ಸಾರಿಗೆ ನೌಕರರ ಮುಷ್ಕರ : ಪ್ರಯಾಣಿಕರಿಗೆ ಇಂದೇ ತಟ್ಟಿದ ಬಿಸಿ
Team Udayavani, Apr 6, 2021, 5:24 PM IST
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸಾರಿಗೆ ನೌಕರರು ನಾಳೆ ಮುಷ್ಕರವನ್ನು ಹಮ್ಮಿಕೊಂಡಿದ್ದಾರೆ. ಕೆಎಸ್ಆರ್ಟಿಸಿ, ಬಿಎಂಟಿಸಿ ಸಾರಿಗೆ ನೌಕರರು ನಾಳೆಯಿಂದ ಮುಷ್ಕರ ನಡೆಸುವುದಾಗಿ ತಿಳಿಸಿದ್ದಾರೆ.
ಇದರ ಬಿಸಿ ಈಗಗಲೇ ಪ್ರಯಾಣಿಕರಿಗೆ ತಟ್ಟುತ್ತಿದ್ದು, ಬೆಂಗಳೂರಿನ ಹಲವಾರು ಕಡೆಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ.
ಪರ್ಯಾಯ ವ್ಯವಸ್ಥೆಗೆ ಮುಂದಾದ ಸರ್ಕಾರ : ಸರ್ಕಾರಿ ಬಸ್ ಗಳ ಬದಲಿಗೆ ಖಾಸಗೀ ಬಸ್ ಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ಕೆಎಸ್ ಆರ್ ಟಿಸಿ ಮುಖ್ಯ ಸಂಚಾರಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.
ಮತ್ತೊಂದು ಕಡೆ ಸಾರಿಗೆ ನೌಕರರ ಪ್ರತಿಭಟನೆಯನ್ನು ನಿಯಂತ್ರಿಸಲು 144 ಸೆಕ್ಷನ್ ಜಾರಿ ಮಾಡಲಾಗಿದೆ.