ನಾಳೆಯೂ ಮುಂದುವರೆಯಲಿದೆ ಸಾರಿಗೆ ನೌಕರರ ಮುಷ್ಕರ : ಕೋಡಿಹಳ್ಳಿ
Team Udayavani, Apr 7, 2021, 5:27 PM IST
ಬೆಂಗಳೂರು : ನಾಳೆಯೂ ಸಾರಿಗೆ ನೌಕರರ ಮುಷ್ಕರ ಮುಂದುವರೆಯುತ್ತದೆ. ನಾಳೆ ಕೂಡ ಬಸ್ ಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಬುಧವಾರ ರಾಜ್ಯ ರಸ್ತೆ ಸಾರಿಗೆ ನೌಕರರ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಾವು ಸಿದ್ಧರಿದ್ದೇವೆ. ಸರ್ಕಾರವು ಕೋವಿಡ್ ನೆಪ ಹೇಳಿ ಸಂಬಳ ಕಡಿಮೆ ನೀಡುತ್ತಿದೆ. ಮಠ, ಮಂದಿರಗಳಿಗೆ ಹಣ ನೀಡಲು ಎಲ್ಲಿಂದ ಬರುತ್ತದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.
ರಾಜ್ಯ ಸರ್ಕಾರ ಈ ತಾರತಮ್ಯ ನೀತಿಯನ್ನು ಬಿಡಬೇಕು. ಆರನೇ ವೇತನ ಆಯೋಗದಂತೆ ವೇತನ ನೀಡಬೇಕು. ಇದು ನಮ್ಮ ಮುಖ್ಯ ಬೇಡಿಕೆ. ಎಸ್ಮಾ ಜಾರಿ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿಲ್ಲ ಎಂದು ಹೇಳಿದ್ದಾರೆ.
ಇನ್ನು ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಸಾರಿಗೆ ನೌಕರರ ಪರ ಹೋರಾಟಗಾರರು ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದಾರೆ.