ರಾಜ್ಯದ ಯೋಜನೆಗೆ ಟಿಟಿಡಿ ಒಪ್ಪಿಗೆ


Team Udayavani, Jul 4, 2020, 7:14 AM IST

ttd plan

ಬೆಂಗಳೂರು: ತಿರುಮಲದಲ್ಲಿ ರಾಜ್ಯ ಸರ್ಕಾರದ ವತಿಯಿಂದ 200 ಕೋಟಿ ರೂ. ವೆಚ್ಚದಲ್ಲಿ ಕಲ್ಯಾಣ ಮಂಟಪ ಹಾಗೂ ವಸತಿ ಗೃಹ ನಿರ್ಮಾಣ ಸಂಬಂಧ ಯೋಜನೆಯ ನೀಲನಕ್ಷೆಗೆ ಟಿಟಿಡಿ ಒಪ್ಪಿಗೆ ನೀಡಿದೆ. ಗೃಹ ಕಚೇರಿ “ಕೃಷ್ಣಾ’ದಲ್ಲಿ  ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಟಿಟಿಡಿ ಅಧ್ಯಕ್ಷ ಎಂ.ವಿ. ಸುಬ್ಟಾರೆಡ್ಡಿ ಅವರು ಉದ್ದೇ ಶಿತ ಯೋಜನೆ ನೀಲನಕ್ಷೆ ಪರಿಶೀಲಿಸಿ ಒಪ್ಪಿಗೆ ನೀಡಿದ್ದಾರೆ.

ತಿರುಮಲದಲ್ಲಿ ಕರ್ನಾಟಕ ಸರ್ಕಾರಕ್ಕೆ ಸೇರಿದ 7 ಏಕರೆ ಭೂಮಿಯಿದ್ದು, ಆ ಜಾಗದಲ್ಲಿ ಡಾರ್ಮೆಂಟ್ರಿ ಸೇರಿದಂತೆ 320 ಕೊಠಡಿಗಳುಳ್ಳ ಮೂರು ವಸತಿಗೃಹ, ಕಲ್ಯಾಣ ಮಂಟಪ ಒಳಗೊಂಡಂತೆ ಇತರೆ ಅಭಿವೃದ್ಧಿ ಯೋಜನೆಗೆ ನೀಲನಕ್ಷೆ ಸಿದ್ಧಪಡಿಸಿದೆ.  ಆದರೆ ಈ ನೀಲನಕ್ಷೆಯಲ್ಲಿ ಕೆಲ ತಿದ್ದುಪಡಿಗೆ ಟಿಟಿಡಿ ಪ್ರಸ್ತಾಪಿಸಿತ್ತು. ಅದರಂತೆ ನೀಲನಕ್ಷೆಯಲ್ಲಿ ಬದಲಾವಣೆ ಮಾಡಲಾಗಿತ್ತು. ಸುಮಾರು 15 ವರ್ಷಗಳಿಂದ ಎದುರಾಗಿದ್ದ ಕಾನೂನು ತೊಡಕುಗಳೆಲ್ಲ ನಿವಾರಣೆಯಾಗಿರುವ ಹಿನ್ನೆಲೆಯಲ್ಲಿ ಎಂ.ವಿ. ಸುಬ್ಟಾರೆಡ್ಡಿ ಅವರು ನೀಲನಕ್ಷೆ, ಯೋಜನಾ ವಿವರವನ್ನು ಶುಕ್ರವಾರ ಪರಿಶೀಲಿಸಿ ಒಪ್ಪಿಗೆ ನೀಡಿದ್ದಾರೆ.

ರಾಜ್ಯ ಸರ್ಕಾರ ಯೋಜನಾ ವೆಚ್ಚವನ್ನು ನೇರವಾಗಿ ಟಿಟಿಡಿಗೆ ವರ್ಗಾಯಿಸಲಿದ್ದು,  ಟಿಟಿಡಿ ವತಿಯಿಂದಲೇ ಕಾಮಗಾರಿ ಅನುಷ್ಠಾನವಾಗಲಿದೆ. ರಾಜ್ಯ ಸರ್ಕಾರದ ಉದ್ದೇಶಿತ ಯೋಜನೆ ಸಂಬಂಧ ಸಿಎಂ ಯಡಿಯೂರಪ್ಪ ಅವರು ಗುರುವಾರ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್‌. ಜಗನ್‌ಮೋಹನ್‌ರೆಡ್ಡಿ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ  ನಡೆಸಿದ್ದರು. ಅದರಂತೆ ಟಿಟಿಡಿ ಅಧ್ಯಕ್ಷರು ಶುಕ್ರವಾರ ಯಡಿಯೂರಪ್ಪ ಅಧ್ಯಕ್ಷತೆಯ ಸಭೆಯಲ್ಲಿ ಪಾಲ್ಗೊಂಡಿದ್ದರು.

ಆಷಾಢ ಕಳೆದ ಬಳಿಕ ಶ್ರಾವಣದಲ್ಲಿ ಮುಖ್ಯಮಂತ್ರಿಯವರು ತಿರುಮಲಕ್ಕೆ ಭೇಟಿ ನೀಡಿ ಯೋಜನೆಗೆ ಶಂಕುಸ್ಥಾಪನೆ  ನೆರವೇರಿಸಲಿದ್ದಾರೆ. ಆ ಸಂದರ್ಭ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್‌. ಜಗನ್‌ಮೋಹನ್‌ ರೆಡ್ಡಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ. ಸಚಿವ ಡಾ.ಕೆ.ಸುಧಾಕರ್‌, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌, ಹಿಂದೂ  ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾ ದಾಯ ದತ್ತಿಗಳ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.