ಕಿರುತೆರೆ ನಟ ಮಂಡ್ಯ ರವಿಪ್ರಸಾದ್ ನಿಧನ
Team Udayavani, Sep 14, 2022, 7:42 PM IST
ಮಂಡ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಎಂ.ರವಿಪ್ರಸಾದ್(43) ಬುಧವಾರ ಸಂಜೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಗುರುಗ್ರಾಮದಲ್ಲಿ ವಿದ್ಯಾರ್ಥಿಗಳ ಗ್ಯಾಂಗ್ ದಾಳಿ : ಓರ್ವ ಗಂಭೀರ
ಸಾಹಿತಿ ಡಾ.ಎಚ್.ಎಸ್.ಮುದ್ದೇಗೌಡರ ಪುತ್ರರಾದ ರವಿಪ್ರಸಾದ್, ತಂದೆ-ತಾಯಿ, ಇಬ್ಬರು ತಂಗಿಯರು, ಪತ್ನಿ, ಪುತ್ರ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮಂಡ್ಯದ ಗೆಳೆಯರ ಬಳಗ ಹಾಗೂ ಜನದನಿ ರಂಗಭೂಮಿ ತಂಡದ ಮೂಲಕ ಕಲೆಯ ಗೀಳು ಅಂಟಿಸಿಕೊಂಡ ರವಿಪ್ರಸಾದ್, ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ನಟಿಸುತ್ತಲೇ ಮಂಡ್ಯ ರವಿ ಆಗಿ ಪ್ರಸಿದ್ಧಿ ಪಡೆದಿದ್ದರು.
ಬಾಲ್ಯದಲ್ಲೇ ನಾಟಕಗಳಲ್ಲಿ ಅಭಿನಯಿಸುತ್ತಿದ್ದ ರವಿ, ನಂತರ ಬಣ್ಣದ ಲೋಕದತ್ತ ಒಲವು ಬೆಳೆಸಿಕೊಂಡರು. ಎಂಎ(ಇಂಗ್ಲೀಷ್) ಮತ್ತು ಎಲ್ಎಲ್ಬಿ ಮಾಡಿದ್ದರೂ ಆಯ್ಕೆ ಮಾಡಿಕೊಂಡಿದ್ದ ವೃತ್ತಿ ಮಾತ್ರ ನಟನೆ. 1996 ರಲ್ಲಿ ಜನದನಿ ಹವ್ಯಾಸಿ ನಾಟಕ ತಂಡ ಸೇರಿ ಅಲ್ಲಿಂದ ಟಿ.ಎಸ್.ನಾಗಾಭರಣ ನಿರ್ದೇಶನದ ಮಹಾಮಾಯಿ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆ ಜಗತ್ತಿಗೆ ಕಾಲಿಟ್ಟರು. ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದರು.
ಮೊದಲು ಬ್ರೇಕ್ ನೀಡಿದ್ದ ಧಾರಾವಾಹಿ ಮಿಂಚು, ನಂತರ ಮುಕ್ತ ಮುಕ್ತ, ಚಿತ್ರಲೇಖ, ಯಶೋಧೆ, ವರಲಕ್ಷ್ಮಿ ಸ್ಟೋರ್ಸ್ ಸೇರಿದಂತೆ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಕೆಲ ವರ್ಷಗಳ ಹಿಂದೆ ಪ್ರಸಾರವಾದ ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿ ಪಾತ್ರದ ಮೂಲಕ ರವಿ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದರು. ಅಲ್ಲದೆ, ಕಾಫಿ ತೋಟ ಸೇರಿದಂತೆ ಹಲವು ಸಿನಿಮಾಗಳಲ್ಲೂ ಇವರು ನಟಿಸಿದ್ದಾರೆ.
ಮೃತ ಎಂ.ರವಿಪ್ರಸಾದ್ ಅವರ ಅಂತ್ಯಕ್ರಿಯೆ ನಗರದ ಕಲ್ಲಹಳ್ಳಿಯಲ್ಲಿರುವ ರುದ್ರಭೂಮಿಯಲ್ಲಿ ಮಧ್ಯಾಹ್ನ 1 ಕ್ಕೆ ನಡೆಯಲಿದೆ ಎಂದು ಮೃತರ ತಂದೆ ಡಾ.ಎಚ್.ಎಸ್.ಮುದ್ದೇಗೌಡ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ