ಇಪ್ಪತ್ತರವರಲ್ಲಿ ಮುಂದಿನ ಐವತ್ತರ ಕನಸು

ಪಕ್ಷಕ್ಕೆ ಯುವಜನರನ್ನು ಸೆಳೆಯಲು ಬಿಜೆಪಿ ರೂಪಿಸಿದ ಹೊಸ ಯೋಜನೆ

Team Udayavani, Oct 26, 2022, 7:25 AM IST

bjpಇಪ್ಪತ್ತರವರಲ್ಲಿ ಮುಂದಿನ ಐವತ್ತರ ಕನಸು

ಬೆಂಗಳೂರು: ಭವಿಷ್ಯದ ನಾಯಕತ್ವ ಸೃಷ್ಟಿಗಾಗಿ ಬೃಹತ್‌ ಪ್ರಮಾಣದಲ್ಲಿ ಯುವ ಸಮೂಹವನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ಮುಂದಾಗಿದೆ.

ಇಪ್ಪತ್ತರಿಂದ ಮೂವತ್ತರೊಳಗಿನ ಎಲ್ಲ ಜಾತಿ ಸಮುದಾಯದ ಯುವಜನರನ್ನು ಬೂತ್‌ ಮಟ್ಟ ದಲ್ಲಿ ಪಕ್ಷಕ್ಕೆ ಸೆಳೆದು ಮುಂದಿನ 50 ವರ್ಷದ ರಾಜಕಾರಣಕ್ಕೆ ಅಣಿಗೊಳಿಸುವುದು ಇದರ ಉದ್ದೇಶ.

ಈ ಯುವಜನರ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಮುದಾಯ ಆಧಾರಿತ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಅವುಗಳ ಫ‌ಲಾನುಭವಿಗಳ ಅಂಕಿ ಅಂಶಗಳನ್ನು ಮತದಾರರ ಮನೆ ಮನೆಗೆ ತಲುಪಿಸುವ ಗುರಿ ಹೊಂದಲಾಗಿದೆ. ಮುಂದಿನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ 2 ವರ್ಷಗಳಲ್ಲಿ ಇದನ್ನು ಸಾಧಿಸುವ ಉದ್ದೇಶವಿದೆ. ಪ್ರತೀ ವಿಧಾನಸಭೆ ಕ್ಷೇತ್ರವಾರು ಬೂತ್‌ ಮಟ್ಟದಲ್ಲಿ ಸೇರಿಸಿಕೊಳ್ಳುವ ಯುವಜನರ ಸಂಖ್ಯೆ, ಹಿನ್ನೆಲೆ, ವಿದ್ಯಾಭ್ಯಾಸ ವಿವರವನ್ನು ಕಲೆ ಹಾಕಲಾಗುತ್ತಿದೆ. ನಾಯಕರಿಗೆ ಗುರಿ
ಈ ಮಧ್ಯೆ, ಸಚಿವರು ಹಾಗೂ ಪಕ್ಷದ ಪದಾಧಿ ಕಾರಿ ಗಳಿಗೆ ವಿದ್ಯಾನಿಧಿ ಯೋಜನೆ, ಎಸ್‌ಸಿ-ಎಸ್‌ಟಿ ಮೀಸಲು ಪ್ರಮಾಣ ಹೆಚ್ಚಳ ಸೇರಿ ದಂತೆ ಸರಕಾರದ ವಿವಿಧ ಯೋಜನೆಗಳ ಬಗ್ಗೆ ಸಭೆಗಳಲ್ಲಿ ಹೆಚ್ಚು ಪ್ರಸ್ತಾವಿಸುವಂತೆ ಸೂಚಿಸ ಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಭಾರತ್‌ ಜೋಡೋ ಯಾತ್ರೆಯಲ್ಲಿ ರಾಹುಲ್‌ಗಾಂಧಿ ಹಾಗೂ ಕಾಂಗ್ರೆಸ್‌ ನಾಯಕರು ಪದೇ ಪದೆ ಪ್ರಸ್ತಾವಿಸಿದ 40 ಪರ್ಸೆಂಟ್‌ ಆರೋಪಗಳ ಬಗ್ಗೆ ಸರಕಾರ ಹಾಗೂ ಪಕ್ಷದ ಮಟ್ಟದಲ್ಲಿ ಸೂಕ್ತ ರೀತಿಯಲ್ಲಿ ತಿರುಗೇಟು ನೀಡಲಿಲ್ಲ ಎಂಬ ಅಸಮಾಧಾನ ಕೇಂದ್ರ ನಾಯಕರಲ್ಲಿದೆ ಎನ್ನಲಾ ಗಿದೆ. ಜತೆಗೆ ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರದ ತಂಡವೂ ವರಿಷ್ಠರಿಗೆ, ಸರಕಾರಗಳ ಸಾಧನೆಯ ಕುರಿತು ಜನರಿಗೆ ಸಚಿವರು ಮಾಹಿತಿ ತಲುಪಿಸುತ್ತಿಲ್ಲ ಎಂದು ವರದಿ ನೀಡಿತ್ತೆನ್ನಲಾಗಿದೆ.

ಪ್ರಚಾರ ಪ್ರಮುಖ್‌ ನೇಮಕ?
ವಿಧಾನಸಭೆ ಚುನಾವಣೆ ಹತ್ತಿರವಾಗು ತ್ತಿದ್ದಂತೆ ರಾಜ್ಯ ಬಿಜೆಪಿಗೆ ಪ್ರಚಾರ ಪ್ರಮುಖ್‌ ನೇಮಕ ಗೊಳ್ಳುವ ಸಾಧ್ಯತೆಯಿದೆ. ನಾಯಕರ ಪ್ರಚಾರ, ಯಾವ ಭಾಗಕ್ಕೆ ಯಾವ ನಾಯಕರು, ಅಲ್ಲಿ ಪ್ರಸ್ತಾವಿಸ ಬೇಕಾದ ವಿಷಯ ಗಳನ್ನು ಈ ಪ್ರಚಾರ ಪ್ರಮುಖ್‌ ಸಿದ್ಧ ಪಡಿಸುವರು. ಆರ್‌ಎಸ್‌ಎಸ್‌ ಹಿನ್ನೆಲೆಯುಳ್ಳ ಯುವ ನಾಯಕ ರೊಬ್ಬರು ನೇಮಕದ ಕುರಿತೂ ಚರ್ಚೆ ನಡೆದಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.