ರಾಜ್ಯಕ್ಕೆ ಎರಡೂವರೆ ಸಿಎಂ! ; ಶಾ ವ್ಯಂಗ್ಯ
Team Udayavani, Feb 22, 2019, 12:25 AM IST
ಬೆಂಗಳೂರು: ಕರ್ನಾಟಕದಲ್ಲಿ ಎರಡೂವರೆ ಮುಖ್ಯಮಂತ್ರಿಗಳ ಸರ್ಕಾರವಿದ್ದು, ದೇಶದಲ್ಲಿ ಘಟಬಂಧನ್ ಸರ್ಕಾರದ ಕಾರ್ಯನಿರ್ವಹಣೆಗೆ ಮಾದರಿ ಸರ್ಕಾರವೆನಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವ್ಯಂಗ್ಯವಾಡಿದ್ದಾರೆ.
ದೇವನಹಳ್ಳಿಯ ಆವತಿಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಲೋಕಸಭಾ ಕ್ಷೇತ್ರಗಳ ಶಕ್ತಿ ಕೇಂದ್ರ ಪ್ರಮುಖ ಸಭೆಯಲ್ಲಿ ಮಾತನಾಡಿದ ಅವರು ಮೈತ್ರಿ ಸರ್ಕಾರದ ವಿರುದ್ಧ ಹರಿಹಾಯ್ದರು.
“”ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಾವು ಕ್ಲರ್ಕ್ನಂತೆ ಕೆಲಸ ಮಾಡುತ್ತಿದ್ದೇನೆ ಎನ್ನುತ್ತಾರೆ, ಸಿದ್ದರಾಮಯ್ಯ ಅವರು ಸೂಪರ್ ಸಿಎಂನಂತಿದ್ದಾರೆ. ಪರಮೇಶ್ವರ್ ಅರ್ಧ ಸಿಎಂನಂತಿದ್ದಾರೆ. ಹಾಗಾಗಿ ಇದು ಎರಡೂವರೆ ಮುಖ್ಯಮಂತ್ರಿಗಳ ಸರ್ಕಾರ. ಇಂತಹ ಸರ್ಕಾರದಿಂದ ಜನರ ಅಭಿವೃದ್ಧಿ ಸಾಧ್ಯವೇ” ಎಂದು ಅಮಿತ್ ಶಾ ಪ್ರಶ್ನಿಸಿದಾಗ ನೆರೆದಿದ್ದ ಸಭಿಕರು ಇಲ್ಲ ಎಂದು ಅನುಮೋದಿಸಿದರು.
ಮಹಾಘಟಬಂಧನ್ ಹೆಸರಿನಲ್ಲಿ ಯಾರೆಲ್ಲಾ ಒಂದಾಗುತ್ತಿದ್ದಾರೆಯೋ ಅವರೆಲ್ಲರೂ ಪ್ರಧಾನಿ ಹುದ್ದೆ ಆಕಾಂಕ್ಷಿಗಳೇ ಆಗಿದ್ದಾರೆ. ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಸಹ ಪ್ರಧಾನಿ ಹುದ್ದೆ ಆಕಾಂಕ್ಷಿಯಾಗಿದ್ದಾರೆ ಎಂದು ವ್ಯಂಗ್ಯವಾಡಿದರು.
ಘಟಬಂಧನ್ನಿಂದ ಅಭಿವೃದ್ಧಿ ಸಾಧ್ಯವಿಲ್ಲ: ಘಟಬಂಧನ್ ಸರ್ಕಾರದಿಂದ ದೇಶದ ಅಭಿವೃದ್ಧಿಯಾಗುವು ದಿಲ್ಲ, ದೇಶದ ಗೌರವ ಹೆಚ್ಚುವುದಿಲ್ಲ. ಅರ್ಥಿಕತೆ ಶಕ್ತಿಯೂ ವೃದ್ಧಿ ಸುವುದಿಲ್ಲ. ದೇಶದ 50 ಕೋಟಿ ಬಡವರಿಗೆ ನೆರವು ಸಿಗುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು