ಸಾರ್ವಜನಿಕರಲ್ಲಿ ವಿಶ್ವಾಸ ಬೆಳೆಸುವ ಯತ್ನ: 400 ಕಿ.ಮೀ. ಸೈಕಲ್‌ ತುಳಿದ ವೈದ್ಯ ಜೋಡಿ!

ಈ ಬಗ್ಗೆ ಅರಿವು ಮೂಡಿಸುವುದೇ ನಮ್ಮ ಯಾತ್ರೆಯ ಉದ್ದೇಶ ಎಂದರು.

Team Udayavani, Jul 28, 2021, 9:20 AM IST

ಸಾರ್ವಜನಿಕರಲ್ಲಿ ವಿಶ್ವಾಸ ಬೆಳೆಸುವ ಯತ್ನ: 400 ಕಿ.ಮೀ. ಸೈಕಲ್‌ ತುಳಿದ ವೈದ್ಯ ಜೋಡಿ!

ಪುತ್ತೂರು: ವೈದ್ಯರು ಮತ್ತು ಸಾರ್ವಜನಿಕರ ನಡುವೆ ನಂಬಿಕೆ, ವಿಶ್ವಾಸವನ್ನು ಬೆಳೆಸಲು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ವೈದ್ಯರಿಬ್ಬರು ಬೆಂಗಳೂರಿನಿಂದ ಮಂಗಳೂರಿನ ತನಕ ಸೈಕಲ್‌ ಯಾತ್ರೆ ನಡೆಸುತ್ತಿದ್ದು ಮಂಗಳವಾರ ಪುತ್ತೂರಿಗೆ ಆಗಮಿಸಿತು.

ಐಸಿಯು ತಜ್ಞರಾದ ಡಾ| ಜಸ್ಟೀನ್‌ ಗೋಪಾಲ್‌ದಾಸ್‌ ಮತ್ತು ಡಾ| ನಿಖಿಲ್‌ ನಾರಾಯಣ ಸ್ವಾಮಿ ಅವರು ಸೈಕಲ್‌ನಲ್ಲಿ ಹೊರಟವರು. ಬೆಂಗಳೂರಿನ ಐಎಂಎ ಹಾಲ್‌ ಬಳಿಯಿಂದ ರವಿವಾರ ಬೆಳಗ್ಗೆ ಯಾತ್ರೆ ಆರಂಭಿಸಿದ್ದು ಸುಮಾರು 400 ಕಿ.ಮೀ. ಸಂಚರಿಸಿ ಅಲ್ಲಲ್ಲಿ ಜನರ ಜತೆಗೆ ಸಂವಹನ ನಡೆಸುವ ಮೂಲಕ ಅರಿವು ಮೂಡಿಸುತ್ತಿದ್ದಾರೆ.

ಬದಲಾವಣೆಗಾಗಿ ಯಾತ್ರೆ: ಬದಲಾವಣೆಯ ಉದ್ದೇಶಕ್ಕಾಗಿ ಈ  ಯಾತ್ರೆ ಹಮ್ಮಿಕೊಂಡಿದ್ದೇವೆ. ವೈದ್ಯರ ಮತ್ತು ಜನರ ನಡುವೆ ಉತ್ತಮ ಸಂವಹನಗಳ ಅಗತ್ಯವಿದೆ. ಜನರು ವೈದ್ಯರಲ್ಲಿ ನಂಬಿಕೆ ಇಡಬೇಕು ಮತ್ತು

ವೈದ್ಯರು ಜನರೊಂದಿಗೆ ಬಾಂಧವ್ಯ ಬೆಳೆಸಿಕೊಳ್ಳಬೇಕು. ವೈದ್ಯರ ಮೇಲೆ  ಹಲ್ಲೆ ಸರಿಯಲ್ಲ. ಹಲವು ಸಂದರ್ಭ ಗಳಲ್ಲಿ ಸಂವಹನದ ಕೊರತೆ ಯಿಂದಾಗಿ ಗೊಂದಲಗಳು ಸಂಭವಿಸುತ್ತವೆ. ರೋಗಿಗಳ ಕುಟುಂಬ  ಸ್ಥರು ಗೊಂದಲ ಸೃಷ್ಟಿಸುವು ದ ಕ್ಕಿಂತಲೂ ಮೂರನೇ ವ್ಯಕ್ತಿಗಳು, ಸಮಾಜಘಾತಕ ಶಕ್ತಿಗಳು ಗೊಂದಲ ಸೃಷ್ಟಿಸಿ ಹಲ್ಲೆ ನಡೆಸುವ ಕೆಲಸಕ್ಕೆ ಮುಂದಾಗುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆಯಲ್ಲ ಎಂದು ಡಾ| ಜಸ್ಟೀನ್‌ ಗೋಪಾಲ್‌ದಾಸ್‌ ಮತ್ತು ಡಾ| ನಿಖೀಲ್‌ ನಾರಾಯಣ ಸ್ವಾಮಿ ಹೇಳುತ್ತಾರೆ.

ಹಲ್ಲೆ ಸರಿಯಲ್ಲ:

ಬಹುತೇಕ ಹಲ್ಲೆ ಪ್ರಕರಣಗಳು ಹಣದ ವಿಚಾರದಿಂದ ಆಗುತ್ತಿಲ್ಲ. ಬದಲಿಗೆ ಜನರಲ್ಲಿನ ನಿರೀಕ್ಷೆಗಳ ಕಾರಣಗಳಿಂದ ನಡೆಯುತ್ತಿವೆ. ಹಿಂದಿನ ಚಿಕಿತ್ಸಾ ವಿಧಾನಕ್ಕೂ ಇಂದಿನ ಚಿಕಿತ್ಸಾ ವಿಧಾನಕ್ಕೂ ಬಹಳಷ್ಟು ವ್ಯತ್ಯಾಸ ಗಳಿವೆ. ಸಾರ್ವಜನಿಕರು ಇದನ್ನು ಅರ್ಥೈಸಿಕೊಳ್ಳಬೇಕು. ವೈದ್ಯರಿಂದ ತಪ್ಪುಗಳು ಸಂಭವಿಸಿದಲ್ಲಿ ಕಾನೂನು ರೀತಿ ಯಲ್ಲಿ ಪರಿಹರಿಸಿಕೊಳ್ಳಬೇಕು. ಈ ಬಗ್ಗೆ ಅರಿವು ಮೂಡಿಸುವುದೇ ನಮ್ಮ ಯಾತ್ರೆಯ ಉದ್ದೇಶ ಎಂದರು.

ಪುತ್ತೂರಿಗೆ ಆಗಮಿಸಿದ ಸಂದರ್ಭ ಪುತ್ತೂರು ಐಎಂಎ ಕರ್ನಾಟಕದ ಹೆರಾಸ್‌ಮೆಂಟ್‌ ಸೆಲ್‌ನ ಅಧ್ಯಕ್ಷ ಡಾ| ಗಣೇಶ್‌ ಪ್ರಸಾದ್‌ ಮುದ್ರಜೆ, ಆಸ್ಪತ್ರೆ ಅಸೋಸಿಯೇಶನ್‌ ಅಧ್ಯಕ್ಷ ಡಾ| ಶ್ರೀಪತಿ ರಾವ್‌, ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಪ್ರಸಾದ್‌ ಕೌಶಲ್‌ ಶೆಟ್ಟಿ, ವೈದ್ಯರಾದ ಡಾ| ಭಾಸ್ಕರ್‌, ಡಾ| ರವೀಂದ್ರ ಸ್ವಾಗತಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.