ಸಾಲ ಮನ್ನಾ ಬೆನ್ನಲ್ಲೇ ಚಾಮರಾಜನಗರ,ವಿಜಯಪುರದಲ್ಲಿ ರೈತರ ಆತ್ಮಹತ್ಯೆ!
Team Udayavani, Jul 6, 2018, 11:29 AM IST
ಚಾಮರಾಜನಗರ/ವಿಜಯಪುರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 2 ಲಕ್ಷ ರೂಪಾಯಿ ವರೆಗಿನ ಸುಸ್ತಿ ಬೆಳೆ ಸಾಲ ಮನ್ನಾ ಮಾಡಿದ ಮರುದಿನವೇ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಚಾಮರಾಜನಗರದ ದೇಮದ ಹಳ್ಳಿ ಎಂಬಲ್ಲಿ ಚಿಕ್ಕಸ್ವಾಮಿ (40) ಎಂಬ ರೈತ ಗುರುವಾರ ತಡರಾತ್ರಿ ಮನೆಯಲ್ಲೇ ಉಟ್ಟ ಪಂಚೆಯಲ್ಲೇ ನೇಣಿಗೆ ಶರಣಾಗಿದ್ದಾರೆ.
ನೇಣಿಗೆ ಶರಣಾದದನ್ನು ನೋಡಿದ ತಂದೆ ಪಕ್ಕದ ನಿವಾಸಿಗಳನನು ಕರೆದು ಚಾಮರಾಜನಗರ , ಮೈಸೂರಿನ ಆಸ್ಪತ್ರೆಗೆ ಕರೆದೊಯ್ದರು. ಅದಾಗಲೇ ಚಿಕ್ಕಸ್ವಾಮಿ ಕೊನೆಯುಸಿರೆಳೆದಿದ್ದರು.
ಚಿಕ್ಕಸ್ವಾಮಿ ಖಾಸಗಿಯವರ ಬಳಿ 1 ಲಕ್ಷ ರೂಪಾಯಿ ಸಾಲ ಮಾಡಿದ್ದು ,ಕಾವೇರಿ ಗ್ರಾಮೀಣ ಬ್ಯಾಂಕ್ನಲ್ಲಿ 40 ಸಾವಿರ ರೂಪಾಯಿ ಸಾಲ ಮಾಡಿದ್ದರು. ವರ್ಷದ ಹಿಂದೆ ಚಿಕ್ಕಸ್ವಾಮಿ ಅವರ 1 ವರ್ಷದ ಮಗು ಸಾವನ್ನಪ್ಪಿತ್ತು ಎಂದು ತಿಳಿದು ಬಂದಿದೆ.
ವಿಜಯಪುರ ರೈತ ಸಾವು
ಮುದ್ದೇ ಬಿಹಾಳದ ಆಲೂರು ಗ್ರಾಮದ ಸಂಗಣ್ಣ ಕಪನೂರ ಜಮೀನಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 2018 ರಲ್ಲಿ ಮಾಡಿದ ಸಾಲವೂ ಮನ್ನಾ ಆಗುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದ ರೈತ ಸಾಲ ಮನ್ನಾ ಆಗದ ಕಾರಣಕ್ಕೆ ನೊಂದು ಸಾವಿಗೆ ಶರಣಾಗಿದ್ದಾರೆ. ಸಂಗಣ್ಣ ಸುಮಾರು 5 ಲಕ್ಷ ರೂಪಾಯಿ ಸಾಲ ಮಾಡಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್