ಕೋವಿಡ್ ಸೋಂಕಿಗೆ ಬೆಂಗಳೂರಿನಲ್ಲಿ ಮತ್ತೋರ್ವ ಬಲಿ: ರಾಜ್ಯದಲ್ಲಿ ಮತ್ತೆರಡು ಹೊಸ ಪ್ರಕರಣ
Team Udayavani, Apr 14, 2020, 7:19 PM IST
ಬೆಂಗಳೂರು: ಕೋವಿಡ್-19 ಸೋಂಕಿಗೆ ಬೆಂಗಳೂರು ನಗರದಲ್ಲಿ ಮತ್ತೊಂದು ಬಲಿಯಾಗಿದೆ. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸ್ಥಳೀಯ 76 ವರ್ಷದ ವೃದ್ಧ ಸೋಂಕಿನ ಕಾರಣದಿಂದ ಇಂದು ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನ ಕಾರಣದಿಂದ ಹತ್ತು ಜನರು ಸಾವನ್ನಪ್ಪಿದ್ದಾರೆ.
ಬಳಲುತ್ತಿದ್ದ ಸ್ಥಳೀಯ 76 ವರ್ಷದ ವೃದ್ಧನಿಗೆ ಕೋವಿಡ್-19 ಸೋಂಕು ತಗುಲಿತ್ತು. ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.
ಮತ್ತೆರಡು ಹೊಸ ಸೋಂಕು ಪ್ರಕರಣ
ರಾಜ್ಯದಲ್ಲಿ ಮತ್ತೆ ಎರಡು ಸೋಂಕು ಪ್ರಕರಣಗಳು ದೃಢವಾಗಿದೆ. ಬೆಂಗಳೂರು ನಗರದ ಮಹಿಳೆ ಮತ್ತು ಭಟ್ಕಳದ ಪುರುಷನಿಗೆ ಸೋಂಕು ದೃಢವಾಗಿದೆ.
ಸೋಂಕಿತ ಸಂಖ್ಯೆ 176ರ ಮಹಿಳೆಯ ಸಂಪರ್ಕದಿಂದ ಆಕೆಯ ಪತಿ 36 ವರ್ಷದ ಭಟ್ಕಳದ ವ್ಯಕ್ತಿಗೆ ಸೋಂಕು ದೃಢವಾಗಿದೆ.
ಸೋಂಕಿತ ಸಂಖ್ಯೆ 199 ರ ಸಂಪರ್ಕದಿಂದ ಬೆಂಗಳುರು ನಗರದ 35 ವರ್ಷದ ಮಹಿಳೆಗೆ ಸೋಂಕು ದೃಢವಾಗಿದ್ದು, ನಗರದ ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧಾರೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು 260 ಜನರಿಗೆ ಸೋಂಕು ದೃಢವಾಗಿದ್ದು, ಅವುಗಳ ಪೈಕಿ 71 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 10 ಜನರು ರಾಜ್ಯದಲ್ಲಿ ಇದುವರೆಗೆ ಸೋಂಕಿನ ಕಾರಣದಿಂದ ಮರಣ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ