Vijayapura ಎರಡು ಪ್ರತ್ಯೇಕ ದುರ್ಘಟನೆ: ರಥೋತ್ಸವದ ವೇಳೆ ಇಬ್ಬರ ಮೃತ್ಯು,

ಮತ್ತೆ ಅವಘಡ.. ಪವಾಡ ಬಸವೇಶ್ವರ ಭಕ್ತರಲ್ಲಿ ಮನೆ ಮಾಡಿದ ಆತಂಕ

Team Udayavani, Apr 6, 2023, 8:41 PM IST

1-sddsad

ವಿಜಯಪುರ: ಜಿಲ್ಲೆಯಲ್ಲಿ ಗುರುವಾರ ಎರಡು ಪ್ರತ್ಯೇಕ‌ ಘಟನೆಗಳಲ್ಲಿ ರಥೋತ್ಸವಗಳ ಸಂದರ್ಭದಲ್ಲಿ ಅವಘಡ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಗುರುವಾರ ಸಂಜೆ ಗೊಲ್ಲಾಳೇಶ್ವರ ರಥೋತ್ಸವಕ್ಕಾಗಿ ಕಳಸ ಕಟ್ಟುವಾಗ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಮೃತಪಟ್ಟಿದ್ದಾರೆ.

ಮೃತ ದುರ್ದೈವಿಯನ್ನು ಸಾಹೇಬ ಪಟೇಲ್ ಖಾಜಾ ಪಟೇಲ್ ಕಾಚಾಪೂರ (55) ಎಂದು ಗುರುತಿಸಲಾಗಿದೆ. ಮೃತ ಸಾಹೇಬ ಪಟೇಲ್ ತನ್ನ 18ನೇ ವಯಸ್ಸಿನಿಂದಲೂ ಗೊಲ್ಲಾಳೇಶ್ವರ ರಥೋತ್ಸವಕ್ಕಾಗಿ ರಥದ ಕಳಶ ಕಟ್ಟುತ್ತ ಬರುತ್ತಿದ್ದರು.

ಸಾಹೇಬ ಪಟೇಲ ರಥದ ಮೇಲ್ತುದಿಯಲ್ಲಿ ಕಲಶ ಕಟ್ಟುವಾಗ ಕೈಯಲ್ಲಿದ್ದ ಹಗ್ಗ ಜಾರಿದೆ. ಇದರಿಂದ ಆಯತಪ್ಪಿ ಸಾಹೇಬ ಪಟೇಲ್ ರಥದ ಮೇಲ್ಭಾಗದಿಂದ ಕೆಳಗೆ ಬಿದ್ದಿದ್ದಾರೆ. ರಥದ ಮೇಲಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡ ಸಾಹೇಬ ಪಟೇಲನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ರಥದ ಮೇಲಿಂದ ಸಾಹೇಬ ಪಟೇಲ್ ಬೀಳುವ ದೃಷ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ದುರಂತ ಘಟನೆ ಹಿನ್ನಲೆಯಲ್ಲಿ ಗ್ರಾಮಸ್ಥರು ರಥೋತ್ಸವ ರದ್ದುಗೊಳಿಸಿದ್ದಾರೆ. ಜಾತ್ರೆಯ ಸಂಭ್ರದಲ್ಲಿದ್ದ ಗ್ರಾಮದಲ್ಲಿ ಏಕಾಏಕಿ ಸಂಭವಿಸಿದ ದುರಂತ ಘಟನೆಯಿಂದ ಶ್ಮಶಾನ ಮೌನ ಆವರಿಸಿದೆ.

ಪವಾಡ ಬಸವೇಶ್ವರ ಜಾತ್ರೆಯಲ್ಲೂ ಅವಘಡ

ಮುದ್ದೇಬಿಹಾಳ ತಾಲೂಕಿನ ಬಸರಕೋಡ ಪವಾಡ ಬಸವೇಶ್ವರ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ದುರಂತ ಸಂಭವಿಸಿದ್ದು, ಗುರುವಾರ ಸಂಜೆ ರಥೋತ್ಸವ ಇನ್ನೇನು ರಥ ಪಾದಗಟ್ಟೆ ತಲುಪುವ ಮುಕ್ತಾಯ ಹಂತದಲ್ಲಿದ್ದಾಗ ರಥ ಎಳೆಯುತ್ತಿದ್ದ ಯುವಕನ ಮೇಲೆ ರಥದ ಗಾಲಿ ಹರಿದು ಮೃತಪಟ್ಟಿದ್ದಾನೆ. ಮೃತ ದುರ್ದೈವಿ ಬಸರಕೋಡ ಗ್ರಾಮದ ಯಲ್ಲಪ್ಪ ವಣಿಕ್ಯಾಳ ಇವರ ಪುತ್ರ ನಾಗರಾಜ ಯಲ್ಲಪ್ಪ ವಣಿಕ್ಯಾಳ (25) ಎಂದು ಗುರುತಿಸಲಾಗಿದೆ.

ಭಾರಿ ಭಾರದ ರಥದ ಗಾಲಿಗಳು ಕಾಲಮೇಲೆ ಹರಿದ ಕಾರಣ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಚಿಕಿತ್ಸೆಗಾಗಿ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾನೆ.

ಬಸರಕೋಡದ ಜಾತ್ರೆಯಲ್ಲಿ ಈ ಹಿಂದೆ ಇದೇ ರೀತಿಯ ಘಟನೆ ನಡೆದು ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದ, ಇನ್ನೊಬ್ಬ ವ್ಯಕ್ತಿ ತೀವ್ರ ಗಾಯಗೊಂಡಿದ್ದ. ಈಗ ಮತ್ತೆ ಅವಘಡ ಸಂಭವಿಸಿದ್ದು ಭಕ್ತರ ಆತಂಕಕ್ಕೆ ಕಾರಣವಾಗಿದೆ. ಘಟನೆ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚುನಾವಣಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.