ಮನೆ ಮೇಲೆ ಮರ ಬಿದ್ದು ಮಹಿಳೆಯರು ಸಾವು: 2 ತಿಂಗಳ ಹಿಂದೆಯೇ ಮರ ತೆರವಿಗೆ ಮನವಿ ಮಾಡಿದ್ದ ಮೃತರು
Team Udayavani, Aug 10, 2022, 4:27 PM IST
ಚಿಕ್ಕಮಗಳೂರು: ಮನೆ ಮೇಲೆ ಮರಬಿದ್ದು ಸಾವನ್ನಪ್ಪಿರುವ ಮಹಿಳೆಯರು ಈ ಹಿಂದೆ ಮರ ತೆರವಿಗೆ ಅಧಿಕಾರಿಗಳಿಗೆ ಮಾಡಿದ ಮನವಿಯ ವಿಡಿಯೋ ಈಗ ವೈರಲ್ ಆಗಿದೆ.
ಘಟನೆ ಹಿನ್ನೆಲೆ:
ಮಂಗಳವಾರ ರಾತ್ರಿ ಸುಮಾರು 10 ಗಂಟೆಯ ಸಮಯದಲ್ಲಿ ಕೆ. ತಲಗೂರು ಗ್ರಾಮದ ಚಂದ್ರಮ್ಮ ಎಂಬವರ ಮನೆಯಲ್ಲಿ ಚಂದ್ರಮ್ಮ, ಸರಿತಾ ಹಾಗೂ ಸರಿತಾ ಅವರ ಮಕ್ಕಳಾದ ಸುನಿಲ್ ಹಾಗೂ ದೀಕ್ಷಿತ್ ಮಲಗಿದ್ದ ವೇಳೆ ಮನೆಯ ಪಕ್ಕದಲ್ಲೇ ಇದ್ದ ಭಾರಿ ಗಾತ್ರದ ಮರವೊಂದು ಚಂದ್ರಮ್ಮ ಅವರ ಮನೆಯ ಮೇಲೆ ಬಿದ್ದು ಸರಿತಾ ಹಾಗೂ ಚಂದ್ರಮ್ಮ ಮೃತಪಟ್ಟಿದ್ದರು. ಘಟನೆಯಲ್ಲಿ ಸರಿತಾ ಅವರ ಮಕ್ಕಳಾದ ಸುನಿಲ್ ಹಾಗೂ ದೀಕ್ಷಿತ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ.
ಎರಡು ತಿಂಗಳ ಹಿಂದೆ ಚಂದ್ರಮ್ಮ ಹಾಗೂ ಸರಿತಾರವರು ಮನೆ ಮುಂದಿದ್ದ ಬೃಹತ್ ಗಾತ್ರದ ಮರವನ್ನು ತೆರವಗೊಳಿಸಿ, ಇದರಿಂದ ಅಪಾಯಯಿದೆ ಎಂದು, ಜನಪ್ರತಿನಿಧಿಗಳಿಗೆ, ಅರಣ್ಯ ಇಲಾಖೆ ಹಾಗೂ ಸ್ಥಳೀಯ ತಹಶೀಲ್ದಾರ್ ಗೆ ಮನವಿ ಮಾಡಿದ್ದರು. ಸದ್ಯ ಈ ವಿಡಿಯೋ ಈಗ ಹೊರ ಬಿದ್ದಿದ್ದು, ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ಹಾಕುತ್ತಿದ್ದಾರೆ.
ಮೊದಲೇ ಮರ ತೆರವಿಗೆ ಮನವಿ ಮಾಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದರಿಂದಲೇ ಈ ದುರಂತ ನಡೆದಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಮೃತರು ಹಿಂದೆ ಮನವಿ ಮಾಡಿರುವ ವಿಡಿಯೋ ಗ್ರಾಮದಾದ್ಯಂತ ವಿಡಿಯೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ