ರಾಜ್ಯದಲ್ಲಿ ನೀಟ್ ಬೇಡ, ಸಿಇಟಿ ಪರೀಕ್ಷೆ ಜಾರಿಯಾಗಲಿ: ಯು.ಟಿ ಖಾದರ್
Team Udayavani, Mar 8, 2022, 11:57 AM IST
ಬೆಂಗಳೂರು: ನೀಟ್ ಪರೀಕ್ಷೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಸೀಟು ಸಿಗುತ್ತಿಲ್ಲ. ನೀಟ್ ತೆಗೆದುಹಾಕಿ ಸಿಇಟಿ ಆಧಾರದಲ್ಲಿ ಸೀಟ್ ಕೊಡಲಿ. ನೀಟ್ ಬೇಡ ಸಿಇಟಿ ಪರೀಕ್ಷೆ ಜಾರಿಯಾಗಲಿ ಎಂದು ವಿಧಾನ ಸಭೆ ವಿರೋಧ ಪಕ್ಷದ ಉಪನಾಯಕ ಯುಟಿ ಖಾದರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ ಮತ್ತು ರಷ್ಯಾ ಯುದ್ಧದಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅವರ ಸಮಸ್ಯೆ ಬಗೆಹರಿಸಬೇಕು. ರಾಜೀವ್ ಗಾಂಧಿ ವಿವಿ ಜತೆ ಚರ್ಚೆ ಮಾಡಿ ಮಾರ್ಗ ಹುಡುಕಿಕೊಳ್ಳಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:ಉಕ್ರೇನಿನಿಂದ ಹುಟ್ಟಿದೂರಿಗೆ ಮರಳಿದ ನವೀನ್ ಕುಮಾರ್ : ಮನೆಗೆ ಶಾಸಕ ,ತಹಸೀಲ್ದಾರ್ ಭೇಟಿ
ಸಿದ್ದರಾಮಯ್ಯರನ್ನು ಸೋಲಿಸಲು ಕಾಂಗ್ರೆಸ್ ನಲ್ಲಿ ಪ್ಲಾನ್ ಎಂಬ ಆಶೋಕ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಖಾದರ್, ಕಾಂಗ್ರೆಸ್ ಪಕ್ಷದ ಬಗ್ಗೆ ಕಾಳಜಿ ತೋರಿಸಿದ ಆಶೋಕ್ ಗೆ ಧನ್ಯವಾದಗಳು. ಆದರೆ ನಮ್ಮಲ್ಲಿ ಯಾವುದೇ ಒಡಕಿಲ್ಲ. ನಾವು ಒಗ್ಗಟ್ಟಾಗಿದ್ದೇವೆ. ಜನರಿಗೆ ವಿರೋಧ ಪಕ್ಷದಲ್ಲಿ ಏನಾಗುತ್ತಿದೆ ಎನ್ನುವುದು ಬೇಕಿಲ್ಲ. ಆಡಳಿತ ಪಕ್ಷದಲ್ಲಿ ಏನಾಗುತ್ತಿದೆಯೆಂದು ನೋಡುತ್ತಿದ್ದಾರೆ. ಇವರು ಅಧಿಕಾರದಲ್ಲಿ ಇದ್ದಾಗ ಮೂರು ಮೂರು ಜನ ಮುಖ್ಯಮಂತ್ರಿಗಳಾಗಿದ್ದಾರೆ. ಈಗ ಇಬ್ಬರು ಮುಖ್ಯಮಂತ್ರಿಗಳಾಗಿದ್ದಾರೆ. ಜನ ಇವರ ಆಡಳಿತದಿಂದ ಬೇಸತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ