Ugadi; ಹಳೆಯ ಎಲೆ ಉದುರಲಿ…: ಸಿದ್ದರಾಮಯ್ಯ ಅವರಿಗೆ ವ್ಯಂಗ್ಯವಾಗಿ ಶುಭ ಕೋರಿದ ಬಿಜೆಪಿ
ಬುದ್ಧಿ..ಜ್ಞಾನ..ಸದ್ಗುಣ...ಧೈರ್ಯ...ಸ್ಥೈರ್ಯ ನೀಡಲಿ!!
Team Udayavani, Apr 9, 2024, 1:15 PM IST
ಬೆಂಗಳೂರು: ಯುಗಾದಿ ದಿನದಂದು ರಾಜ್ಯ ಬಿಜೆಪಿ ಸಿಎಂ ಸಿದ್ದರಾಮಯ್ಯ ಅವರಿಗೆ ವ್ಯಂಗ್ಯವಾಗಿ ಎಕ್ಸ್ ಪೋಸ್ಟ್ ಮಾಡಿ ಹಬ್ಬದ ಶುಭಾಶಯ ಕೋರಿದೆ.
ಎಕ್ಸ್ ಪೋಸ್ಟ್ ನಲ್ಲಿ ”ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯುಗಾದಿ ಹಬ್ಬದ ಶುಭಾಶಯಗಳು. ಹಳೆಯ ಎಲೆ ಉದುರಿ ಹೊಸ ಚಿಗುರು ಮೂಡುವ ಸಮಯ ಬಂದಿದೆ. ಇನ್ನಾದರೂ ಭಗವಂತ ಅವರಿಗೆ ಸದ್ಬುದ್ಧಿ ಕರುಣಿಸಿ ಈ ಬದಲಾವಣೆ ತರಲೆಂದು ವಿಘ್ನ ವಿನಾಶಕ ವಿನಾಯಕನಲ್ಲಿ ಕರುನಾಡು ಮೊರೆಯಿಡುತ್ತಿದೆ.
ಅರಾಜಕತೆಯನ್ನು ಹೋಗಲಾಡಿಸುವ ಬುದ್ಧಿ ನೀಡಲಿ
ಕಾವೇರಿಯನ್ನು ತಮಿಳುನಾಡಿಗೆ ಹರಿಸದೆ ಕನ್ನಡಿಗರ ಹಿತಾಸಕ್ತಿ ಕಾಪಾಡುವ ಸ್ಥೈರ್ಯ ತೋರಿಸಲಿ
ಸುಳ್ಳು ಹೇಳುವುದನ್ನು ಕಡಿಮೆ ಮಾಡುವ ಜ್ಞಾನ ನೀಡಲಿ
ರೈತರಿಗೆ ಬರ ಪರಿಹಾರ ನೀಡುವಂತಹ ಗುಣ ಕರುಣಿಸಲಿ
ಮಹಿಳೆಯರ ರಕ್ಷಣೆ ಮಾಡುವ ಹೊಣೆ ಹೊರುವಂತಾಗಲಿ
ಭಯೋತ್ಪಾದಕರನ್ನು ಹತ್ತಿಕ್ಕುವ ಧೈರ್ಯ ತುಂಬಲಿ
ಬಡವರ ಮೇಲೆ ಮಮಕಾರ ತೋರುವ ಮಾನವೀಯತೆ ದೊರೆಯಲಿ
ಮೋಜು ಮಾಡದೆ ಕನ್ನಡಿಗರ ತೆರಿಗೆ ಹಣ ಉಳಿಸುವ ಜವಾಬ್ದಾರಿ ತೋರಲಿ
ನಾಲಿಗೆ ಹರಿಬಿಡದೆ ಗೌರವ ನೀಡುವ ಸಂಸ್ಕಾರ ಸಿಗುವಂತಾಗಲಿ
ಜಾತಿ, ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಬಿಡುವ ಸದ್ಗುಣ ನೀಡಲಿ
ಇಷ್ಟು ಬುದ್ಧಿಯನ್ನು ಆ ಭಗವಂತ ಕರುಣಿಸಿಬಿಟ್ಟರೆ, ಸಮೃದ್ಧವಾಗಿ ಕಾಲಕಾಲಕ್ಕೆ ಮಳೆ-ಬೆಳೆಯಾಗಿ ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿ ಕಂಗೊಳಿಸಲಿದೆ ಎಂದು ಬಿಜೆಪಿ ಟೀಕಾತ್ಮಕ ಪೋಸ್ಟ್ ಮಾಡಿ ಶುಭ ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ